Featured

ಮಂಗಳೂರು : ಸಿದ್ದರಾಮಯ್ಯನವರು ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ : ನಳಿನ್ ಕಟೀಲ್ – Vishwanews24

ಸಿದ್ದರಾಮಯ್ಯನವರು ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ : ನಳಿನ್ ಕಟೀಲ್

ಮಂಗಳೂರು: ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡಿಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡ್ತಾ ಇದೆ. ಕಾಂಗ್ರೆಸ್ ನ ಹೀನಾ ರಾಜಕಾರಣ ಮತ್ತು ಸಿದ್ದರಾಮಯ್ಯ ಮಾನಸೀಕತೆ ಬಯಲಾಗಿದೆ. ಒಬ್ಬ ಮುಖ್ಯಮಂತ್ರಿ ಸಾಂವಿಧಾನಿಕವಾಗಿ ಆತನ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿಂದಿನಿಂದ ನಡೆದುಕೊಂಡು ಬಂದ ಪೂಜೆಗಳನ್ನು ಕೆಲವು ಇಲಾಖೆಗಳಲ್ಲಿ ಮಾಡುತ್ತಾರೆ. ನಂಬಿಕೆಗಳ ಆಧಾರದಲ್ಲಿ ಕೆಎಸ್ಸಾರ್ಟಿಸಿ, ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಮಾಡುತ್ತಾರೆ ಹಾಗಾಗಿ ಈ ಪೂಜೆಗಳನ್ನು ನಿಷೇಧಿಸುವ, ಬಹಿಷ್ಕಾರ ಹಾಕುವ ಕ್ರಮ ಸರಿಯಲ್ಲ. ಪೂಜೆ ಮಾಡುವ ಪೊಲೀಸರನ್ನ ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್ ನಿಂದ ಆಗ್ತಿದೆ ಎಂದರು.

ಇನ್ನು ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಭಜರಂಗದಳ ನಿಷೇಧವನ್ನು ಉಲ್ಲೇಖ ಮಾಡ್ತಾ ಇದ್ದಾರೆ. ಇದು ಕಾಂಗ್ರೆಸ್ ಹಿಂದೂ ಸಮಾಜದ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನೋದನ್ನ ತೋರಿಸಿದೆ. ಹಿಂದೂ ಆಚರಣೆ ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನದನ್ನು ತೋರಿಸಿದೆ. ಇಂಥದ್ದರ ವಿರುದ್ದ ಹೋರಾಟ ಮಾಡಿ ಉತ್ತರ ಕೊಡೋ ಶಕ್ತಿ ಬಿಜೆಪಿಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ನ ಮಾನಸಿಕತೆಯನ್ನ ವಿರೋಧಿಸ್ತೇನೆ. ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡ್ತೇವೆ. ಎಲ್ಲಾ ಇಲಾಖೆಗಳಲ್ಲೂ ರಾಜಕಾರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಅಧಿಕಾರಿಗಳನ್ನ ಕಂಟ್ರೋಲ್ ಮಾಡಿ ಕಾಂಗ್ರೆಸ್ ಅಜೆಂಡಾ ಹೇರುವ ಕೆಲಸ ಮಾಡ್ತಿದೆ. ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿ ಆಗಿದೆ. ಇವತ್ತು ಅಂಥಹ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆ ಸಿದ್ದರಾಮಯ್ಯ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನ ಪ್ರಕಟಿಸಿಯೇ ಪ್ರಕಟಿಸುತ್ತೆ. ನಾವು ಹೋರಾಟದ ಮೂಲಕ ಕಾಂಗ್ರೆಸ್ ಗೆ ಉತ್ತರ ಕೊಡ್ತೇವೆ. ನಾವು ಹಿಂದೂಗಳ ಪರವಾಗಿದ್ದೇವೆ, ಗೋಹತ್ಯೆ ನಿಷೇಧ, ಮತಾಂತರ ನಿಷೇಧದ ಪರವಾಗಿದ್ದೇವೆ. ಹಿಂದೂ ಸಮಾಜಕ್ಕೆ ತೊಂದರೆಯಾದ್ರೆ ಬಿಜೆಪಿ ಹೋರಾಟ ಮಾಡಲಿದೆ. ಕಾಂಗ್ರೆಸ್ ಗೆ ಬಹುಮತ ಕೊಟ್ಟರೂ ಗಲಾಟೆ ಮಾಡ್ತಾ ಇದ್ದಾರೆ. ಇವರು ಸರ್ಕಾರ ಬರುವ ಮೊದಲೇ ಜಗಳ ಮಾಡಿಕೊಂಡು ಬಂದವರು. ಜನಾಶೀರ್ವಾದ ಸಿಕ್ಕರೂ ಇವರ ಬೀದಿ ಜಗಳ ಜೋರಾಗಿದೆ. ಇನ್ನೂ ಮಂತ್ರಿ ಮಂಡಲ ರಚನೆ ಆಗಿಲ್ಲ, ಇದು ರಚನೆ ಆದ್ರೆ ಕಾಂಗ್ರೆಸ್ ನ ಸ್ಥಿತಿ ಏನಾಗುತ್ತೆ ಕಾದು ನೋಡಿ. ನಮ್ಮ 40% ಕಮಿಷನ್ ವಿರುದ್ದ ಇವರು ತನಿಖೆ ಮಾಡಲಿ. ಜೊತೆಗೆ ಸಿದ್ದರಾಮಯ್ಯ ವಿರುದ್ದ ನಾವು ಲೋಕಾಯುಕ್ತಕ್ಕೆ ಕೊಟ್ಟ ದೂರಿನ ತನಿಖೆಯೂ ಆಗಲಿ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago