ಮಂಗಳೂರು: ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಅಶ್ವತ್ಥನಾರಾಯಣ ವಿರುದ್ಧ ಭಾರತೀಯ ದಂಡ ಸಂಹಿತೆ 352ರ ಪ್ರಕಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವರೊಬ್ಬರು ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಬೇಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಐವನ್ ಆಗ್ರಹಿಸಿದರು.
ಸಚಿವ ಡಾ.ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ, ಅವರನ್ನು ಪೊಲೀಸರು ಬಂಧಿಸುವವರೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಐವನ್ ಡಿಸೋಜ ತಿಳಿಸಿದರು.
ಟಿಪ್ಪುವಿನ ಬಗ್ಗೆ ಜನರಲ್ಲಿ ದ್ವೇಷ ಭಾವನೆ ಮೂಡಿಸುತ್ತಿರುವ ಅಶ್ವತ್ಥನಾರಾಯಣ ಅವರು, ಟಿಪ್ಪು ಪುಸ್ತಕ ಬಿಡುಗಡೆಗೊಳಿಸಿದ ಜಗದೀಶ್ ಶೆಟ್ಟರ್, ಟಿಪ್ಪು ಪೋಷಾಕು ಧರಿಸಿದ ಯಡಿಯೂರಪ್ಪರಿಗೂ ಸಿದ್ದರಾಮಯ್ಯರ ವಿರುದ್ಧ ನೀಡಿದ ಹೇಳಿಕೆಯನ್ನೇ ನೀಡುತ್ತಾರಾ ಎಂದು ಐವನ್ ಪ್ರಶ್ನಿಸಿದರು.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…