ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿ ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ ಸಿ.ಟಿ. ರವಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಅವರು ವಿಶೇಷವಾಗಿ ಗೌರವಿಸಿದರು.
ಬೆಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ದಯಾನಂದ ಜಿ. ಕತ್ತಲ್ಸಾರ್, “ಸಚಿವ ಸ್ಥಾನಕ್ಕೆ ನ್ಯಾಯ ಒದಗಿಸಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಎಲ್ಲಾ ಅಕಾಡೆಮಿಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ರಾಜ್ಯದ ಸಂಸ್ಕೃತಿ ಸಂಸ್ಕಾರಗಳನ್ನು ಪ್ರತಿಬಿಂಬಿಸಲು ನಮ್ಮೆಲ್ಲರನ್ನು ಹುರಿದುಂಬಿಸಿ ಪ್ರೋತ್ಸಾಹಿಸಿ, ಅವರ ಸ್ಥಾನಕ್ಕೊಂದು ನ್ಯಾಯ ಒದಗಿಸಿದ ಅಪರೂಪದ ಸಚಿವರಾಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿರುವುದು ವಿಶೇಷ” ಎಂದು ಹೇಳಿದರು.
“ಸಚಿವರಾಗಿ ಸ್ಥಾನಮಾನ ಪಡೆದಿದ್ದ ಸಿ.ಟಿ.ರವಿ ಅವರು ಯಾವುದೇ ಕೆಲಸಕ್ಕೂ ನಾನಿದ್ದೇನೆ ನೀವು ಮುಂದುವರಿಯರಿ ಅಧ್ಯಕ್ಷರೇ ಎಂದು ನೈತಿಕ ಸ್ಥೈರ್ಯ ತುಂಬಿದವರು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರನ್ನು ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿಯನ್ನು ನೀಡಿ ಸಾರ್ವತ್ರಿಕವಾಗಿ ಗೌರವಿಸಲಾಯಿತು.
ಈ ವೇಳೆ ಅಕಾಡೆಮಿಯ ಸದಸ್ಯರಾದ ಚೇತಕ್ ಪೂಜಾರಿ ಮಂಗಳೂರು, ನರೇಂದ್ರ ಎಂ. ಪೂಜಾರಿ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…