ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿ ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ ಸಿ.ಟಿ. ರವಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಅವರು ವಿಶೇಷವಾಗಿ ಗೌರವಿಸಿದರು.
ಬೆಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ದಯಾನಂದ ಜಿ. ಕತ್ತಲ್ಸಾರ್, “ಸಚಿವ ಸ್ಥಾನಕ್ಕೆ ನ್ಯಾಯ ಒದಗಿಸಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಎಲ್ಲಾ ಅಕಾಡೆಮಿಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ರಾಜ್ಯದ ಸಂಸ್ಕೃತಿ ಸಂಸ್ಕಾರಗಳನ್ನು ಪ್ರತಿಬಿಂಬಿಸಲು ನಮ್ಮೆಲ್ಲರನ್ನು ಹುರಿದುಂಬಿಸಿ ಪ್ರೋತ್ಸಾಹಿಸಿ, ಅವರ ಸ್ಥಾನಕ್ಕೊಂದು ನ್ಯಾಯ ಒದಗಿಸಿದ ಅಪರೂಪದ ಸಚಿವರಾಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿರುವುದು ವಿಶೇಷ” ಎಂದು ಹೇಳಿದರು.
“ಸಚಿವರಾಗಿ ಸ್ಥಾನಮಾನ ಪಡೆದಿದ್ದ ಸಿ.ಟಿ.ರವಿ ಅವರು ಯಾವುದೇ ಕೆಲಸಕ್ಕೂ ನಾನಿದ್ದೇನೆ ನೀವು ಮುಂದುವರಿಯರಿ ಅಧ್ಯಕ್ಷರೇ ಎಂದು ನೈತಿಕ ಸ್ಥೈರ್ಯ ತುಂಬಿದವರು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರನ್ನು ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿಯನ್ನು ನೀಡಿ ಸಾರ್ವತ್ರಿಕವಾಗಿ ಗೌರವಿಸಲಾಯಿತು.
ಈ ವೇಳೆ ಅಕಾಡೆಮಿಯ ಸದಸ್ಯರಾದ ಚೇತಕ್ ಪೂಜಾರಿ ಮಂಗಳೂರು, ನರೇಂದ್ರ ಎಂ. ಪೂಜಾರಿ ಉಪಸ್ಥಿತರಿದ್ದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…