ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ.
ಒಂದೇ ವಾರದಲ್ಲಿ 4ನೇ ಬಾರಿ ಭೂಕಂಪನದ ಅನುಭವವಾಗಿದೆ. ರಾತ್ರಿ 1.15 ರ ವೇಳೆಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂ ಕಂಪನದ ಆಗಿರುವ ಬಗ್ಗೆ ಜನರು ದೂರವಾಣಿಯ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅನುಭವ ಹಂಚಿಕೊಂಡಿದ್ದಾರೆ.
ಗುತ್ತಿಗಾರು, ತೊಡಿಕಾನ, ಉಬರಡ್ಕ, ಅರಂತೋಡು, ಸಂಪಾಜೆ ಸೇರಿದಂತೆ ಎಲ್ಲಾ ಕಡೆ ಭೂಮಿ ಕಂಪಿಸಿದೆ. ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂ ಕಂಪನ ಉಂಟಾಗಿದ್ದು, ಜನರ ಆತಂಕ ಹೆಚ್ಚಿಸಿದೆ. ಜೂ.25 ರಂದು ಬೆಳಿಗ್ಗೆ 9.10 ಕ್ಕೆ 2.3 ತೀವ್ರತೆಯ ಭೂ ಕಂಪನ ಆಗಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಗ್ಗೆ ರಿಕ್ಟರ್ ಸ್ಕೇಲ್ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯ ಕಂಪನ ಉಂಟಾಗಿತ್ತು.
ನಿರಂತರವಾಗಿ ಭೂಕಂಪನವಾಗುತ್ತಿರುವುದು ಹಾಗೂ ಭಾರಿ ಮಳೆ ಕೂಡ ಆಗುತ್ತಿರುವುದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಸಂಪಾಜೆಯಲ್ಲಿ ಕೆಲವರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…