ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ.
ಒಂದೇ ವಾರದಲ್ಲಿ 4ನೇ ಬಾರಿ ಭೂಕಂಪನದ ಅನುಭವವಾಗಿದೆ. ರಾತ್ರಿ 1.15 ರ ವೇಳೆಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂ ಕಂಪನದ ಆಗಿರುವ ಬಗ್ಗೆ ಜನರು ದೂರವಾಣಿಯ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅನುಭವ ಹಂಚಿಕೊಂಡಿದ್ದಾರೆ.
ಗುತ್ತಿಗಾರು, ತೊಡಿಕಾನ, ಉಬರಡ್ಕ, ಅರಂತೋಡು, ಸಂಪಾಜೆ ಸೇರಿದಂತೆ ಎಲ್ಲಾ ಕಡೆ ಭೂಮಿ ಕಂಪಿಸಿದೆ. ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂ ಕಂಪನ ಉಂಟಾಗಿದ್ದು, ಜನರ ಆತಂಕ ಹೆಚ್ಚಿಸಿದೆ. ಜೂ.25 ರಂದು ಬೆಳಿಗ್ಗೆ 9.10 ಕ್ಕೆ 2.3 ತೀವ್ರತೆಯ ಭೂ ಕಂಪನ ಆಗಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಗ್ಗೆ ರಿಕ್ಟರ್ ಸ್ಕೇಲ್ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯ ಕಂಪನ ಉಂಟಾಗಿತ್ತು.
ನಿರಂತರವಾಗಿ ಭೂಕಂಪನವಾಗುತ್ತಿರುವುದು ಹಾಗೂ ಭಾರಿ ಮಳೆ ಕೂಡ ಆಗುತ್ತಿರುವುದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಸಂಪಾಜೆಯಲ್ಲಿ ಕೆಲವರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…