Featured

ಮಂಗಳೂರು : ಸುಳ್ಯ ತಾಲೂಕಿನಾದ್ಯಂತ ಮತ್ತೆ ಕಂಪಿಸಿದ ಭೂಮಿ – Vishwanews24

ಮಂಗಳೂರು : ಸುಳ್ಯ ತಾಲೂಕಿನಾದ್ಯಂತ ಮತ್ತೆ ಕಂಪಿಸಿದ ಭೂಮಿ – Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ.

ಒಂದೇ ವಾರದಲ್ಲಿ 4ನೇ ಬಾರಿ ಭೂಕಂಪನದ ಅನುಭವವಾಗಿದೆ. ರಾತ್ರಿ 1.15 ರ ವೇಳೆಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂ ಕಂಪನದ ಆಗಿರುವ ಬಗ್ಗೆ ಜನರು ದೂರವಾಣಿಯ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅನುಭವ ಹಂಚಿಕೊಂಡಿದ್ದಾರೆ.

ಗುತ್ತಿಗಾರು, ತೊಡಿಕಾನ, ಉಬರಡ್ಕ, ಅರಂತೋಡು, ಸಂಪಾಜೆ ಸೇರಿದಂತೆ ಎಲ್ಲಾ ಕಡೆ ಭೂಮಿ‌ ಕಂಪಿಸಿದೆ. ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂ ಕಂಪನ ಉಂಟಾಗಿದ್ದು, ಜನರ ಆತಂಕ ಹೆಚ್ಚಿಸಿದೆ. ಜೂ.25 ರಂದು ಬೆಳಿಗ್ಗೆ 9.10 ಕ್ಕೆ 2.3 ತೀವ್ರತೆಯ ಭೂ ಕಂಪನ ಆಗಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಗ್ಗೆ ರಿಕ್ಟರ್ ಸ್ಕೇಲ್‌ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯ ಕಂಪನ ಉಂಟಾಗಿತ್ತು.

ನಿರಂತರವಾಗಿ ಭೂಕಂಪನವಾಗುತ್ತಿರುವುದು ಹಾಗೂ ಭಾರಿ ಮಳೆ ಕೂಡ ಆಗುತ್ತಿರುವುದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಸಂಪಾಜೆಯಲ್ಲಿ ಕೆಲವರು ಮನೆಯಿಂದ ಹೊರಗೋಡಿ ಬಂದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago