ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ.
ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲು ರಾಜ್ಯ ಸರಕಾರಕ್ಕೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಕೋರಿತು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುಹಾಸ್ ಶೆಟ್ಟಿ ತಾಯಿ, ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು. ನಮ್ಮ ಮಗ ಹಿಂದೂ ಕಾರ್ಯಕರ್ತ, ರೌಡಿ ಅಲ್ಲ ಎಂದು ಹೇಳಿದರು. ನಾನು ಆರೋಗ್ಯವಾಗಿಲ್ಲ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದೇನೆ, ಆದರೆ ನನ್ನ ಮಗನಿಗೆ ನ್ಯಾಯ ಸಿಗಲು ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ ಎಂದರು.
ನಂತರ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಮ್ ಯುವಕ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25ಲಕ್ಷ ರೂ.ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…