Featured

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ – vishwanews24

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ.

ರಾಜಭವನಕ್ಕೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಲು ರಾಜ್ಯ ಸರಕಾರಕ್ಕೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಕೋರಿತು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುಹಾಸ್ ಶೆಟ್ಟಿ ತಾಯಿ, ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು. ನಮ್ಮ ಮಗ ಹಿಂದೂ ಕಾರ್ಯಕರ್ತ, ರೌಡಿ ಅಲ್ಲ ಎಂದು ಹೇಳಿದರು. ನಾನು ಆರೋಗ್ಯವಾಗಿಲ್ಲ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದೇನೆ, ಆದರೆ ನನ್ನ ಮಗನಿಗೆ ನ್ಯಾಯ ಸಿಗಲು ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ ಎಂದರು.

ನಂತರ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಮ್ ಯುವಕ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25ಲಕ್ಷ ರೂ.ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

3 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

3 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

3 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

4 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

4 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

4 hours ago