ಉಡುಪಿ: ಮಂಗಳೂರು- ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ.
ರೈಲು 09057 / 09058 ಸಂಖ್ಯೆಯಡಿ ಸೂರತ್- ಮಂಗಳೂರು ಜಂಕ್ಷನ್ ನಡುವೆ ವಿಶೇಷ ಸೇವೆ ಒದಗಿಸುತಿತ್ತು. ಜೂ.3ರಿಂದ 19057 / 19058 ರೈಲು ಸಂಖ್ಯೆಯಡಿ ನಿರಂತರ ಸೇವೆ ಒದಗಿಸಲಿದೆ.
ಇದನ್ನೂ ಓದಿ:
19057 ರೈಲು ಜೂ. 3ರಿಂದ ಪ್ರತೀ ಬುಧವಾರ ಹಾಗೂ ರವಿವಾರ ಸಂಜೆ 7.35ಕ್ಕೆ ಸೂರತ್ನಿಂದ ಹೊರಟು ಮಾರನೆ ದಿನ ಸಂಜೆ 7.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 19058 ರೈಲು ಜೂ.4ರಿಂದ ಪ್ರತಿ ಗುರುವಾರ ಹಾಗೂ ಸೋಮವಾರ ರಾತ್ರಿ 10.30ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮಾರನೆ ದಿನ ರಾತ್ರಿ 11.45ಕ್ಕೆ ಸೂರತ್ ತಲುಪಲಿದೆ.
ಈ ರೈಲಿಗೆ ಉದ್ಘಾ, ವಲ್ನಾಡ್, ವಾಪಿ, ವಾಸೈ ರೋಡ್, ಪನ್ವೇಲ್, ರೋಹಾ, ಚಿಪ್ಸನ್, ರತ್ನಾಗಿರಿ, ಸಿಂಧುದುರ್ಗ, ಸಾವಂತವಾಡಿ, ತಿವಿಂ, ಮಡ್ಗಾಂವ್, ಕಾರವಾರ, ಅಂಕೋಲಾ, ಗೋಕರ್ಣ ರಸ್ತೆ, ಕುಮಟಾ, ಮುರ್ಡೇಶ್ವರ, ಭಟ್ಕಳ, ಬೈಂದೂರು (ಮೂಕಾಂಬಿಕಾ ರೋಡ್), ಕುಂದಾಪುರ, ಉಡುಪಿ, ಮೂಲ್ಕಿ ಹಾಗೂ ಸುರತ್ಕಲ್ ಸಹಿತ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಇದೆ.
ಇದನ್ನೂ ಓದಿ:
ರೈಲಿನಲ್ಲಿ 20 ಬೋಗಿಗಳು ಇರಲಿವೆ. 8 ಎಸಿ, ಕೋಚ್, 6 ಕ್ಲೀಪರ್ ಕೋಚ್, 4 ಜನರಲ್ ಕೋಚ್ ಹಾಗೂ 2 ಎಸ್ಎಲ್ ಆರ್ಡಿ ಕೋಚ್ಗಳು ಇರಲಿವೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…