ಮಂಗಳೂರು : ಮಂಗಳೂರು ರೈಲು ನಿಲ್ದಾಣದಲ್ಲಿ 4 ಮತ್ತು 5ನೇ ಪ್ಲಾಟ್ಫಾರಂ ಸೆಪ್ಟಂಬರ್ ವೇಳೆಗೆ ಸಿದ್ಧಗೊಂಡು ರೈಲು ಸಂಚಾರಕ್ಕೆ ಲಭ್ಯವಾಗಲಿದೆ ಎಂದು ದಕ್ಷಿಣ ರೈಲ್ವೇ ಮಹಾಪ್ರಬಂಧಕ ಜಾನ್ ಥಾಮಸ್ ಹೇಳಿದ್ದಾರೆ.
ರೈಲ್ವೇ ವ್ಯವಸ್ಥೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾನ್ ಥಾಮಸ್, “ಮಂಗಳೂರು ಸೆಂಟ್ರಲ್ನಲ್ಲಿ ಪಿಟ್ಲೆನ್ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಹೊಸ ಪ್ಲಾಟ್ಫಾರಂಗಳ ಕಾಮಗಾರಿಯನ್ನು ಕೈಗೆತ್ತಿಕೊಂಡು ಆರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಇದರ ನಿರ್ಮಾಣಕ್ಕೆ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು ಗುತ್ತಿಗೆ ಪ್ರಕ್ರಿಯೆ ಕೂಡ ನಡೆದಿದೆ “ಎಂದರು.
ಇನ್ನು ಹೆಚ್ಚುವರಿ ಪ್ಲಾಟ್ಫಾರಂಗಳ ನಿರ್ಮಾಣ ದಿಂದ ಜಿಲ್ಲೆಯ ಜನರ ಬೇಡಿಕೆಗೆ ಅನು ಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈಲು ಗಳನ್ನು ಓಡಿಸಲು ಅನುಕೂಲವಾಗಲಿದ್ದು, ರೈಲ್ವೇ ವಿಭಾಗೀಯ ಪ್ರಬಂಧಕ ತ್ರಿಲೋಕ್ ಕೊಠಾರಿ, ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾದ ಹನುಮಂತ ಕಾಮತ್, ಅಹ್ಮದ್ ಬಾವ, ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ಅನಿಲ್ ಹೆಗ್ಡೆ, ಜಿ.ಕೆ. ಭಟ್ ಉಪಸ್ಥಿತರಿದ್ದರು.
ಮಂಗಳೂರು ಭಾಗದ ವಿವಿಧ ಬೇಡಿಕೆ ಗಳ ಬಗ್ಗೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು, ಜಿ.ಎಂ. ಜಾನ್ ಥಾಮಸ್ ಅವರಿಗೆ ಮನವಿ ಸಲ್ಲಿಸಿದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…