Featured

ಮಂಗಳೂರು: ಸೆ. 2ರಂದು ನಗರ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ – Vishwanews24

ಮಂಗಳೂರು: ಸೆ. 2ರಂದು ನಗರ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿದ್ದಾರೆ.

ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಪೊಲೀಸ್‌ ಇಲಾಖೆಯ ಮಾಹಿತಿಯಂತೆ ತಿಳಿದುಬಂದಿದೆ.

ಇನ್ನುಂದೆ ಉಡುಪಿ ನಗರಸಭೆ ಬ್ರೋಕರ್ ಗಳಿಗೆ ನೋ ಎಂಟ್ರಿ: ರಘುಪತಿ ಖಡಕ್ ವಾರ್ನಿಂಗ್ – Vishwnaews24

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ, ಐ.ಟಿ.ಐ.ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ. 2 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ನೀಡಿರುವ ರಜೆ ಅವದಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವಂತೆ ತಿಳಿಸಲಾಗಿದೆ.

ಇದಲ್ಲದೆ ಸೆ. 2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 1.00ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಅಲ್ಲದೆ ನಗರದ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ,.

ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

20 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

22 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

22 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

22 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

22 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

22 hours ago