ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಬಹುಭಾಷಾ ಕವಿಗೋಷ್ಠಿ ಸೆ.3ರಂದು ಸಂಜೆ 4.30ಕ್ಕೆ ನಡೆಯಲಿದೆ.
ನಗರದ ಸ್ಟೇಟ್ ಬ್ಯಾಂಕ್, ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಸಹಕಾರಿ ಸಧನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದಿವಂಗತ ಮುಮ್ತಾಜ್ ಬೇಗಮ್’ರವರ (ಕೃತಿ: ‘ಸ್ವಾತಂತ್ರ್ಯದ ಕಹಳೆ’) ಕುಟುಂಬಸ್ಥರು ಪ್ರಶಸ್ತಿ ಸ್ವೀಕರಿಸಲಿದ್ದು, ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಪ್ರಮುಖ ಭಾಷಣ ಮಾಡಲಿದ್ದಾರೆ.
ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಅಧ್ಯಕ್ಷತೆ ವಹಿಸಲಿದ್ದು, ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಕವಿಗೋಷ್ಠಿ ಉದ್ಘಾಟಿಸಲಿದ್ದಾರೆ. ಪ್ರಶಾಂತಿ ಶೆಟ್ಟಿ ಇರುವೈಲು, ರೇಮಂಡ್ ಡಿ’ ಕುನ್ಹ, ಸಿಹಾನ ಬಿ.ಎಂ. ಹಾಗೂ ಮೌl ಇಮ್ರಾನುಲ್ಲಾ ಖಾನ್ ಮನ್ಸೂರಿ ಕವನ ಮಂಡಿಸಲಿದ್ದಾರೆ ಎಂದು ಸಂಘದ ಪ್ರ. ಕಾರ್ಯದರ್ಶಿ ಬಿ.ಎ.ಮುಹಮ್ಮದ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…