Featured

ಮಂಗಳೂರು ಸೇರಿ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಪಡೆದುಕೊಂಡ ಅದಾನಿ ಕಂಪನಿ – Vishwanews24

ನವದೆಹಲಿ: ಗುಜರಾತ್ ಮೂಲದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಈಗ ಅಧಿಕೃತವಾಗಿ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಮಂಗಳೂರು ಸೇರಿದಂತೆ ದೇಶದ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ)ದ ವ್ಯಾಪ್ತಿಯಲ್ಲಿ ಬರುವ ಒಟ್ಟು 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸೋಮವಾರ ಹರಾಜು ಪ್ರಕ್ರಿಯೆ ನಡೆಯಿತು. ಈ ಹರಾಜು ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಬಿಡ್ ಮಾಡಿದ ಅದಾನಿ ಕಂಪನಿ ಮಂಗಳೂರು, ಅಹಮದಾಬಾದ್, ಜೈಪುರ, ತಿರುವನಂತಪುರಂ, ಲಖನೌ ವಿಮಾನ ನಿಲ್ದಾಣವನ್ನು ಪಡೆದುಕೊಂಡಿದೆ.
ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಹಣೆಗೆ ನೀಡುವುದಕ್ಕೆ ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿತ್ತು. ಅದರಲ್ಲಿ ಐದು ವಿಮಾನ ನಿಲ್ದಾಣಗಳ ಗುತ್ತಿಗೆಯನ್ನು ಅದಾನಿ ಗ್ರೂಪ್‌ ಗೆದ್ದುಕೊಂಡಿದೆ. ಅವು – ಅಹಮದಾಬಾದ್‌, ತಿರುವನಂತಪುರಂ, ಲಖನೌ, ಮಂಗಳೂರು ಮತ್ತು ಜೈಪುರ ವಿಮಾನ ನಿಲ್ದಾಣ. ಇನ್ನೊಂದು ವಿಮಾನ ನಿಲ್ದಾಣವಾದ ಗುವಾಹಟಿ ಏರ್‌ಪೋರ್ಟ್‌ನ ಟೆಂಡರ್‌ ಮಂಗಳವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದೀಗ ಬಿಡ್ಡಿಂಗ್‌ ಗೆದ್ದ ಅದಾನಿ ಕಂಪನಿ, ಮುಂದಿನ 50 ವರ್ಷಗಳ ಕಾಲ ಈ 5 ವಿಮಾನ ನಿಲ್ದಾಣಗಳ ನಿರ್ವಹಣೆ ಮಾಡಲಿದೆ.
ಅದಾನಿ ಕಂಪನಿಗೆ ಬೆಂಗಳೂರು ಮೂಲದ ಜಿಎಂಆರ್ ಗ್ರೂಪ್ ಪ್ರಬಲ ಪೈಪೋಟಿಯನ್ನು ನೀಡಿತ್ತು. ಆದರೆ ಅದಾನಿ ಕಂಪನಿ ಅತಿ ಹೆಚ್ಚು ಮೊತ್ತದ ಬಿಡ್ ಸಲ್ಲಿಸಿದ ಕಾರಣ 6ರ ಪೈಕಿ 5 ನಿಲ್ದಾಣವನ್ನು ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago