Featured

ಮಂಗಳೂರು ಸೇರಿ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಪಡೆದುಕೊಂಡ ಅದಾನಿ ಕಂಪನಿ – Vishwanews24

ನವದೆಹಲಿ: ಗುಜರಾತ್ ಮೂಲದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಈಗ ಅಧಿಕೃತವಾಗಿ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಮಂಗಳೂರು ಸೇರಿದಂತೆ ದೇಶದ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ)ದ ವ್ಯಾಪ್ತಿಯಲ್ಲಿ ಬರುವ ಒಟ್ಟು 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸೋಮವಾರ ಹರಾಜು ಪ್ರಕ್ರಿಯೆ ನಡೆಯಿತು. ಈ ಹರಾಜು ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಬಿಡ್ ಮಾಡಿದ ಅದಾನಿ ಕಂಪನಿ ಮಂಗಳೂರು, ಅಹಮದಾಬಾದ್, ಜೈಪುರ, ತಿರುವನಂತಪುರಂ, ಲಖನೌ ವಿಮಾನ ನಿಲ್ದಾಣವನ್ನು ಪಡೆದುಕೊಂಡಿದೆ.
ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಹಣೆಗೆ ನೀಡುವುದಕ್ಕೆ ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿತ್ತು. ಅದರಲ್ಲಿ ಐದು ವಿಮಾನ ನಿಲ್ದಾಣಗಳ ಗುತ್ತಿಗೆಯನ್ನು ಅದಾನಿ ಗ್ರೂಪ್‌ ಗೆದ್ದುಕೊಂಡಿದೆ. ಅವು – ಅಹಮದಾಬಾದ್‌, ತಿರುವನಂತಪುರಂ, ಲಖನೌ, ಮಂಗಳೂರು ಮತ್ತು ಜೈಪುರ ವಿಮಾನ ನಿಲ್ದಾಣ. ಇನ್ನೊಂದು ವಿಮಾನ ನಿಲ್ದಾಣವಾದ ಗುವಾಹಟಿ ಏರ್‌ಪೋರ್ಟ್‌ನ ಟೆಂಡರ್‌ ಮಂಗಳವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದೀಗ ಬಿಡ್ಡಿಂಗ್‌ ಗೆದ್ದ ಅದಾನಿ ಕಂಪನಿ, ಮುಂದಿನ 50 ವರ್ಷಗಳ ಕಾಲ ಈ 5 ವಿಮಾನ ನಿಲ್ದಾಣಗಳ ನಿರ್ವಹಣೆ ಮಾಡಲಿದೆ.
ಅದಾನಿ ಕಂಪನಿಗೆ ಬೆಂಗಳೂರು ಮೂಲದ ಜಿಎಂಆರ್ ಗ್ರೂಪ್ ಪ್ರಬಲ ಪೈಪೋಟಿಯನ್ನು ನೀಡಿತ್ತು. ಆದರೆ ಅದಾನಿ ಕಂಪನಿ ಅತಿ ಹೆಚ್ಚು ಮೊತ್ತದ ಬಿಡ್ ಸಲ್ಲಿಸಿದ ಕಾರಣ 6ರ ಪೈಕಿ 5 ನಿಲ್ದಾಣವನ್ನು ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

17 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

17 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

18 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

20 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

21 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

21 hours ago