Featured

ಮಂಗಳೂರು ಸೇರಿ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಪಡೆದುಕೊಂಡ ಅದಾನಿ ಕಂಪನಿ – Vishwanews24

ನವದೆಹಲಿ: ಗುಜರಾತ್ ಮೂಲದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಈಗ ಅಧಿಕೃತವಾಗಿ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಮಂಗಳೂರು ಸೇರಿದಂತೆ ದೇಶದ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ)ದ ವ್ಯಾಪ್ತಿಯಲ್ಲಿ ಬರುವ ಒಟ್ಟು 6 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸೋಮವಾರ ಹರಾಜು ಪ್ರಕ್ರಿಯೆ ನಡೆಯಿತು. ಈ ಹರಾಜು ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಬಿಡ್ ಮಾಡಿದ ಅದಾನಿ ಕಂಪನಿ ಮಂಗಳೂರು, ಅಹಮದಾಬಾದ್, ಜೈಪುರ, ತಿರುವನಂತಪುರಂ, ಲಖನೌ ವಿಮಾನ ನಿಲ್ದಾಣವನ್ನು ಪಡೆದುಕೊಂಡಿದೆ.
ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಹಣೆಗೆ ನೀಡುವುದಕ್ಕೆ ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿತ್ತು. ಅದರಲ್ಲಿ ಐದು ವಿಮಾನ ನಿಲ್ದಾಣಗಳ ಗುತ್ತಿಗೆಯನ್ನು ಅದಾನಿ ಗ್ರೂಪ್‌ ಗೆದ್ದುಕೊಂಡಿದೆ. ಅವು – ಅಹಮದಾಬಾದ್‌, ತಿರುವನಂತಪುರಂ, ಲಖನೌ, ಮಂಗಳೂರು ಮತ್ತು ಜೈಪುರ ವಿಮಾನ ನಿಲ್ದಾಣ. ಇನ್ನೊಂದು ವಿಮಾನ ನಿಲ್ದಾಣವಾದ ಗುವಾಹಟಿ ಏರ್‌ಪೋರ್ಟ್‌ನ ಟೆಂಡರ್‌ ಮಂಗಳವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದೀಗ ಬಿಡ್ಡಿಂಗ್‌ ಗೆದ್ದ ಅದಾನಿ ಕಂಪನಿ, ಮುಂದಿನ 50 ವರ್ಷಗಳ ಕಾಲ ಈ 5 ವಿಮಾನ ನಿಲ್ದಾಣಗಳ ನಿರ್ವಹಣೆ ಮಾಡಲಿದೆ.
ಅದಾನಿ ಕಂಪನಿಗೆ ಬೆಂಗಳೂರು ಮೂಲದ ಜಿಎಂಆರ್ ಗ್ರೂಪ್ ಪ್ರಬಲ ಪೈಪೋಟಿಯನ್ನು ನೀಡಿತ್ತು. ಆದರೆ ಅದಾನಿ ಕಂಪನಿ ಅತಿ ಹೆಚ್ಚು ಮೊತ್ತದ ಬಿಡ್ ಸಲ್ಲಿಸಿದ ಕಾರಣ 6ರ ಪೈಕಿ 5 ನಿಲ್ದಾಣವನ್ನು ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago