ಮಂಗಳೂರು: ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಡಿ. 4 ರಂದು ಸಂಜೆ ವೇಳೆ ಸಂಭವಿಸಿದೆ.
ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸರ್ಸ್ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮೃತರು ಯುವ ವಯಸ್ಸಿನಲ್ಲಿ ಕಬ್ಬಡ್ಡಿ ಆಟಗಾರರೂ ಹಾಗೂ ತಾಲೀಮಿನಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದವರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಬೆಳ್ತಂಗಡಿಯ ಮಹಮ್ಮದ್ ಆಶೀಕ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…