Featured

ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ಸೆಲ್ಫಿ ವಿವಾದ  ; ಪೊಲೀಸ್ ಕಮಿಷನರ್ ಪ್ರತಿಕ್ರಿಯೆ – vishwanews24

ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ಸೆಲ್ಫಿ ವಿವಾದ  ; ಪೊಲೀಸ್ ಕಮಿಷನರ್ ಪ್ರತಿಕ್ರಿಯೆ

ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಎಸಿಪಿ ಸೆನ್ ರವೀಶ್ ನಾಯಕ್ ಅವರಿಗೆ ಪ್ರಾಥಮಿಕ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅವರು ತನಿಖೆ ಮಾಡಿ ಕೆಲ ದಾಖಲಾತಿ ಸಂಗ್ರಹ ಮಾಡಿದ್ದಾರೆ. ಫ್ಲೈಟ್ ಟಿಕೇಟ್ ಉರ್ವ ಠಾಣೆ ಇನ್ಸ್ ಪೆಕ್ಟರ್ ಹಣ ಕೊಟ್ಟು ಬುಕ್ ಮಾಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ತನಿಖೆ ಸಂದರ್ಭ ಹೆಡ್ ಪೊಲೀಸ್ ಕಾನ್ ಸ್ಟೇಬಲ್ ತಪ್ಪು ಮಾಡಿದ್ದಾರೆ. ಆರೋಪಿಯ ಜೊತೆ ಸೆಲ್ಫಿ ತೆಗೆದುಕೊಂಡಿದ್ದು, ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ. ಹೆಡ್ ಪೊಲೀಸ್ ಕಾನ್ ಸ್ಟೇಬಲ್ ಅಮಾನತು ಮಾಡಿದ್ದೇವೆ.

ಠಾಣೆಯಲ್ಲಿ ತನಿಖೆ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ತಂಡ ಬಂದಿದೆ. ಆ ವೇಳೆ ಇನ್ಸ್ ಪೆಕ್ಟರ್ ಸೈಬರ್ ಕ್ರೈಮ್ ಆರೋಪಿ ನಡೆಸಿದ ಕೃತ್ಯದ ಬಗ್ಗೆ ವಿದ್ಯಾರ್ಥಿಗಳ ಜೊತೆ ಹೇಳಿಕೊಂಡಿದ್ದಾರೆ. ಪೊಲೀಸ್ ಇಲಾಖೆ ನಿಯಮ ಪ್ರಕಾರ ಕ್ರಿಮಿನಲ್ಸ್ ಗಳನ್ನು ವಿದ್ಯಾರ್ಥಿಗಳ ಮುಂದೆ ಹಾಜರು ಮಾಡಬಾರದು. ಹೀಗಾಗಿ ಉರ್ವ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಿದ್ದೇವೆ ಎಂದು ಅವರು ತಿಳಿಸಿದರು.

Vishwa News 24

Recent Posts

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

13 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

20 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

33 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

40 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

48 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 hours ago