ಮಂಗಳೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದರೂ ಕೆಲವರು ಧರ್ಮಸ್ಥಳ ಕ್ಷೇತ್ರ ಹಾಗೂ ಜೈನ ಸಮುದಾಯದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರದ ಪ್ರಮುಖರ ವಿರುದ್ಧ ಆರೋಪ ಮಾಡಿ, ಮುಗ್ಧ ಜನರನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವ ವ್ಯಕ್ತಿಯೊಬ್ಬರು ಸಿಬಿಐ ತನಿಖೆ ನಡೆಸುವಾಗ, ಸಾಕ್ಷಿಯ ಹೇಳಿಕೆ ನೀಡಲು ಹಿಂದೇಟು ಹಾಕಿದರು. ಯಾರ ಮೇಲೆ ಆರೋಪ ಮಾಡಲಾಗಿತ್ತೋ ಅವರು ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಈಗ ರಾಷ್ಟ್ರದ ಅತ್ಯುನ್ನತ ತನಿಖಾ ಸಂಸ್ಥೆಯ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಆರೋಪ ಮಾಡುವ ವ್ಯಕ್ತಿಗೆ ನಿಜವಾದ ಕಾಳಜಿ ಇದ್ದರೆ, ನೈಜ ಆರೋಪಿಗಳ ಬಂಧನಕ್ಕೆ ಹಾಗೂ ಪೊಲೀಸ್ ತನಿಖೆಯ ವಿರುದ್ಧ ಧರಣಿ ನಡೆಸಲಿ’ ಎಂದರು.
ಬೆಳ್ತಂಗಡಿಯ ಧೀರಜ್ ಜೈನ್ ಮಾತನಾಡಿ, ‘ನಮ್ಮ ಮೇಲೆ ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಜತೆಗಿದ್ದವರಿಗೆ ಆರೋಪದ ಬಗ್ಗೆ ದೃಢತೆ ಇದ್ದರೆ, ತುಳುನಾಡಿನ ಆರಾಧ್ಯ ಕ್ಷೇತ್ರವಾದ ಕಾನತ್ತೂರು ದೈವ ಕ್ಷೇತ್ರಕ್ಕೆ 10 ದಿನಗಳೊಳಗೆ ಬಂದು ಪ್ರಮಾಣ ಮಾಡಲಿ. ನಾವು ದೈವದ ಸಮ್ಮುಖದಲ್ಲಿ ಪ್ರಮಾಣ ಮಾಡಲು ಸಿದ್ಧರಿದ್ದೇವೆ. ಹಿಂದೆಯೂ ಪ್ರಮಾಣಕ್ಕೆ ಕರೆದಾಗ ಅವರು ಬಂದಿರಲಿಲ್ಲ. ಈಗಲಾದರೂ ಕ್ಷೇತ್ರಕ್ಕೆ ಬಂದು ಪ್ರಮಾಣ ಮಾಡಲಿ’ ಎಂದು ಸವಾಲು ಹಾಕಿದರು.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…