ಉಳ್ಳಾಲ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತದೇಹ ಊರಿಗೆ ತರಲು ಶಾಸಕ ಯು.ಟಿ ಖಾದರ್ ಅವರು ಸ್ಪಂದಿಸಿದ್ದು, ಅದರಂತೆ ಇಂಡಿಯನ್ ಸೋಷಿಯಲ್ ಫೋರಂ ಸಂಘಟನೆ ಮೃತದೇಹ ತವರೂರಿಗೆ ತರಲು ಶ್ರಮಿಸುತ್ತಿದೆ.
ಸೌದಿ ಅರೆಬಿಯಾದಲ್ಲಿ ಕೆಲಸಕ್ಕಿದ್ದ, ಕುತ್ತಾರು ಪಂಡಿತ್ ಹೌಸ್ ನಿವಾಸಿ ರೊನಾಲ್ಡ್ ಡಿಸೋಜ (50) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದವರು. ಮಾ.19 ರಂದು ತಮ್ಮ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಂದು ಮನೆಮಂದಿ ಜತೆಗೆ ವೀಡಿಯೋ ಸಂಭಾಷಣೆ ನಡೆಸಿದ್ದ ರೊನಾಲ್ಡ್ ರಾತ್ರಿ ವೇಳೆ ಕರೆ ಸ್ವೀಕರಿಸುತ್ತಿರಲಿಲ್ಲ. ಎರಡು ದಿನಗಳಲ್ಲಿ ಊರಿಗೆ ಬರುವುದನ್ನು ತಿಳಿಸಿದ್ದ ಅವರ ಸಾವಿನ ಕುರಿತು ಮನೆಮಂದಿಗೆ ಮಾ.21 ರಂದು ಮುಂಬೈ ಖಾಸಗಿ ಏಜೆನ್ಸಿ ಮುಖೇನ ಗೊತ್ತಾಗಿದೆ.
ಸೌದಿ ಅರೇಬಿಯಾದ ಜಿಝಾನ್ ನ ಒಸೋಲ್ ಅಲ್ ಬಾನ್ ಎಂಬ ಕಂಪೆನಿಯಲ್ಲಿ ರೊನಾಲ್ಡ್ ಎಲೆಕ್ಟ್ರಿಶಿಯನ್ ಆಗಿ ದುಡಿಯುತ್ತಿದ್ದರು.
ಇದನ್ನೂ ಓದಿ : ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ಸಾವು -Vishwanews24
ಮಾಜಿ ಸಚಿವರ ಸ್ಪಂದನೆ:
ಮನೆಮಂದಿಯ ಮನವಿಯಂತೆ ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಅವರು ಇಂಡಿಯನ್ ಸೋಷಿಯಲ್ ಫೋರಂ ಸಂಘಟನೆಯ ಜಿ.ಕೆ. ಸಲೀಂ ಗುರುವಾಯನಕೆರೆ ಮತ್ತು ಸಿದ್ದೀಖ್ ಉಳ್ಳಾಲ್ ಅವರನ್ನು ಸಂಪರ್ಕಿಸಿದ್ದರು. ಅವರು ಆಸ್ಪತ್ರೆ ಹುಡುಕಾಡಿ, ಪೊಲೀಸ್ ಪ್ರಕ್ರಿಯೆ ಮುಗಿದ ತಕ್ಷಣ ಮೃತದೇಹವನ್ನು ತವರೂರಿಗೆ ಕಳುಹಿಸುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೃತ ರೊನಾಲ್ಡ್ ಡಿ ಸೋಜಾ ಅವರು ಪತ್ನಿ ಸರಿತಾ ಡಿ ಸೋಜಾ ಮಕ್ಕಳಾದ ರಿಯೋನ್ (16) ಮತ್ತು ರೋವಿನ್ (14) ಎಂಬವರನ್ನು ಅಗಲಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]