Featured

ಮಂಗಳೂರು : ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು : ಮೃತದೇಹ ತವರೂರಿಗೆ ತರಲು ಸ್ಪಂದಿಸಿದ ಶಾಸಕ ಯು.ಟಿ ಖಾದರ್ -Vishwanews24

ಮಂಗಳೂರು : ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು : ಮೃತದೇಹ ತವರೂರಿಗೆ ತರಲು ಸ್ಪಂದಿಸಿದ ಶಾಸಕ ಯು.ಟಿ ಖಾದರ್ -Vishwanews24

ಉಳ್ಳಾಲ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತದೇಹ ಊರಿಗೆ ತರಲು ಶಾಸಕ ಯು.ಟಿ ಖಾದರ್ ಅವರು ಸ್ಪಂದಿಸಿದ್ದು, ಅದರಂತೆ ಇಂಡಿಯನ್ ಸೋಷಿಯಲ್ ಫೋರಂ ಸಂಘಟನೆ ಮೃತದೇಹ ತವರೂರಿಗೆ ತರಲು ಶ್ರಮಿಸುತ್ತಿದೆ.

ಸೌದಿ ಅರೆಬಿಯಾದಲ್ಲಿ ಕೆಲಸಕ್ಕಿದ್ದ, ಕುತ್ತಾರು ಪಂಡಿತ್ ಹೌಸ್ ನಿವಾಸಿ ರೊನಾಲ್ಡ್ ಡಿಸೋಜ (50) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದವರು. ಮಾ.19 ರಂದು ತಮ್ಮ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಂದು ಮನೆಮಂದಿ ಜತೆಗೆ ವೀಡಿಯೋ ಸಂಭಾಷಣೆ ನಡೆಸಿದ್ದ ರೊನಾಲ್ಡ್ ರಾತ್ರಿ ವೇಳೆ ಕರೆ ಸ್ವೀಕರಿಸುತ್ತಿರಲಿಲ್ಲ. ಎರಡು ದಿನಗಳಲ್ಲಿ ಊರಿಗೆ ಬರುವುದನ್ನು ತಿಳಿಸಿದ್ದ ಅವರ ಸಾವಿನ ಕುರಿತು ಮನೆಮಂದಿಗೆ ಮಾ.21 ರಂದು ಮುಂಬೈ ಖಾಸಗಿ ಏಜೆನ್ಸಿ ಮುಖೇನ ಗೊತ್ತಾಗಿದೆ.

ಸೌದಿ ಅರೇಬಿಯಾದ ಜಿಝಾನ್ ನ ಒಸೋಲ್ ಅಲ್ ಬಾನ್ ಎಂಬ ಕಂಪೆನಿಯಲ್ಲಿ ರೊನಾಲ್ಡ್ ಎಲೆಕ್ಟ್ರಿಶಿಯನ್ ಆಗಿ ದುಡಿಯುತ್ತಿದ್ದರು.

ಇದನ್ನೂ ಓದಿ : ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ಸಾವು -Vishwanews24

ಮಾಜಿ ಸಚಿವರ ಸ್ಪಂದನೆ:

ಮನೆಮಂದಿಯ ಮನವಿಯಂತೆ ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಅವರು ಇಂಡಿಯನ್ ಸೋಷಿಯಲ್ ಫೋರಂ ಸಂಘಟನೆಯ ಜಿ.ಕೆ. ಸಲೀಂ ಗುರುವಾಯನಕೆರೆ ಮತ್ತು ಸಿದ್ದೀಖ್ ಉಳ್ಳಾಲ್ ಅವರನ್ನು ಸಂಪರ್ಕಿಸಿದ್ದರು. ಅವರು ಆಸ್ಪತ್ರೆ ಹುಡುಕಾಡಿ, ಪೊಲೀಸ್ ಪ್ರಕ್ರಿಯೆ ಮುಗಿದ ತಕ್ಷಣ ಮೃತದೇಹವನ್ನು ತವರೂರಿಗೆ ಕಳುಹಿಸುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೃತ ರೊನಾಲ್ಡ್ ಡಿ ಸೋಜಾ ಅವರು ಪತ್ನಿ ಸರಿತಾ ಡಿ ಸೋಜಾ ಮಕ್ಕಳಾದ ರಿಯೋನ್ (16) ಮತ್ತು ರೋವಿನ್ (14) ಎಂಬವರನ್ನು ಅಗಲಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

11 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

11 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago