Featured

ಮಂಗಳೂರು : ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು : ಮೃತದೇಹ ತವರೂರಿಗೆ ತರಲು ಸ್ಪಂದಿಸಿದ ಶಾಸಕ ಯು.ಟಿ ಖಾದರ್ -Vishwanews24

ಮಂಗಳೂರು : ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು : ಮೃತದೇಹ ತವರೂರಿಗೆ ತರಲು ಸ್ಪಂದಿಸಿದ ಶಾಸಕ ಯು.ಟಿ ಖಾದರ್ -Vishwanews24

ಉಳ್ಳಾಲ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತದೇಹ ಊರಿಗೆ ತರಲು ಶಾಸಕ ಯು.ಟಿ ಖಾದರ್ ಅವರು ಸ್ಪಂದಿಸಿದ್ದು, ಅದರಂತೆ ಇಂಡಿಯನ್ ಸೋಷಿಯಲ್ ಫೋರಂ ಸಂಘಟನೆ ಮೃತದೇಹ ತವರೂರಿಗೆ ತರಲು ಶ್ರಮಿಸುತ್ತಿದೆ.

ಸೌದಿ ಅರೆಬಿಯಾದಲ್ಲಿ ಕೆಲಸಕ್ಕಿದ್ದ, ಕುತ್ತಾರು ಪಂಡಿತ್ ಹೌಸ್ ನಿವಾಸಿ ರೊನಾಲ್ಡ್ ಡಿಸೋಜ (50) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದವರು. ಮಾ.19 ರಂದು ತಮ್ಮ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಂದು ಮನೆಮಂದಿ ಜತೆಗೆ ವೀಡಿಯೋ ಸಂಭಾಷಣೆ ನಡೆಸಿದ್ದ ರೊನಾಲ್ಡ್ ರಾತ್ರಿ ವೇಳೆ ಕರೆ ಸ್ವೀಕರಿಸುತ್ತಿರಲಿಲ್ಲ. ಎರಡು ದಿನಗಳಲ್ಲಿ ಊರಿಗೆ ಬರುವುದನ್ನು ತಿಳಿಸಿದ್ದ ಅವರ ಸಾವಿನ ಕುರಿತು ಮನೆಮಂದಿಗೆ ಮಾ.21 ರಂದು ಮುಂಬೈ ಖಾಸಗಿ ಏಜೆನ್ಸಿ ಮುಖೇನ ಗೊತ್ತಾಗಿದೆ.

ಸೌದಿ ಅರೇಬಿಯಾದ ಜಿಝಾನ್ ನ ಒಸೋಲ್ ಅಲ್ ಬಾನ್ ಎಂಬ ಕಂಪೆನಿಯಲ್ಲಿ ರೊನಾಲ್ಡ್ ಎಲೆಕ್ಟ್ರಿಶಿಯನ್ ಆಗಿ ದುಡಿಯುತ್ತಿದ್ದರು.

ಇದನ್ನೂ ಓದಿ : ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ಸಾವು -Vishwanews24

ಮಾಜಿ ಸಚಿವರ ಸ್ಪಂದನೆ:

ಮನೆಮಂದಿಯ ಮನವಿಯಂತೆ ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಅವರು ಇಂಡಿಯನ್ ಸೋಷಿಯಲ್ ಫೋರಂ ಸಂಘಟನೆಯ ಜಿ.ಕೆ. ಸಲೀಂ ಗುರುವಾಯನಕೆರೆ ಮತ್ತು ಸಿದ್ದೀಖ್ ಉಳ್ಳಾಲ್ ಅವರನ್ನು ಸಂಪರ್ಕಿಸಿದ್ದರು. ಅವರು ಆಸ್ಪತ್ರೆ ಹುಡುಕಾಡಿ, ಪೊಲೀಸ್ ಪ್ರಕ್ರಿಯೆ ಮುಗಿದ ತಕ್ಷಣ ಮೃತದೇಹವನ್ನು ತವರೂರಿಗೆ ಕಳುಹಿಸುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೃತ ರೊನಾಲ್ಡ್ ಡಿ ಸೋಜಾ ಅವರು ಪತ್ನಿ ಸರಿತಾ ಡಿ ಸೋಜಾ ಮಕ್ಕಳಾದ ರಿಯೋನ್ (16) ಮತ್ತು ರೋವಿನ್ (14) ಎಂಬವರನ್ನು ಅಗಲಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

36 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

46 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

53 minutes ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

1 hour ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago