ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ ಖಾರದ ಪುಡಿ ಎರಚಿ ಸ್ಕೂಟರ್ ಡಿಕ್ಕಿಯಲ್ಲಿದ್ದ 46 ಸಾವಿರ ರೂ. ದೋಚಿರುವ ಘಟನೆ ವರದಿಯಾಗಿದೆ.
ಗಂಜಿಮಠದ ಝಾರಾ ಹಾಲ್ನಲ್ಲಿ ಅಡುಗೆ ಮೇಲ್ವಿಚಾರಕರಾಗಿದ್ದ ಮಹಮ್ಮದ್ ಮನ್ಸೂರ್ ಹಣ ಕಳೆದು ಕೊಂಡವರು.
ಇದನ್ನೂ ಓದಿ:
ಅವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದಂತೆ, ಎ.26ರಂದು ರಾತ್ರಿ 9:10ರ ವೇಳೆಗೆ ಬಂಗ್ಲಗುಡ್ಡೆಗೆ ತಲುಪಿ ದ್ದಾರೆ. ಆಗ ರಸ್ತೆಯ ಬದಿಯಲ್ಲಿ ನಿಂತಿದ್ದ ಇಬ್ಬರು ಯುವಕರು ಮನ್ಸೂರ್ ಅವರ ಸ್ಕೂಟರ್ನ್ನು ನಿಲ್ಲಿಸಿ, ತಮ್ಮ ಸ್ಕೂಟರ್ ಕೆಟ್ಟಿದೆ ಎಂದು ಹೇಳಿದ್ದಾರೆ. ಮನ್ಸೂರ್ ಯುವಕರ ಸ್ಕೂಟರ್ ನ ಹತ್ತಿರ ಹೋಗಿ ಪೆಟ್ರೋಲ್ ಪೈಪನ್ನು ಪರಿಶೀಲಿಸುತ್ತಿರುವಾಗ, ಯುವಕರು ತಮ್ಮ ಬಳಿ ಇದ್ದ ಖಾರದ ಪುಡಿಯನ್ನು ಮನ್ಸೂರ್ ಕಣ್ಣಿಗೆ ಎರಚಿದ್ದಾರೆ. ಮನ್ಸೂರ್ ಬಳಿಕ ರಸ್ತೆಯಲ್ಲಿ ಬರುತ್ತಿದ್ದ ವಾಹನವೊಂದನ್ನು ನಿಲ್ಲಿಸಿ ಅವರರಿಂದ ನೀರು ಪಡೆದು, ಮುಖ ತೊಳೆದು ಸ್ಕೂಟರ್ನ ಡಿಕ್ಕಿ ತೆರೆದು ನೋಡಿದಾಗ 46,000 ರೂ. ನಗದನ್ನು ದುಷ್ಕರ್ಮಿಗಳು ಎಗರಸಿಕೊಂಡು ಪರಾರಿಯಾಗಿರುವುದು ಗೊತ್ತಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…