Featured

ಮಂಗಳೂರು :  ಸ್ಥಳೀಯರ ವಿರೋಧಿ ನೀತಿಗಳಿಗೆ MRPL ನಾಯಕತ್ವ ; ತ‌ನ್ನ ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ಕಂಪನಿಯನ್ನು ಗಡಿಪಾರು ಮಾಡಬೇಕು : ಮುನೀರ್ ಕಾಟಿಪಳ್ಳ – Vishwanews24

ಮಂಗಳೂರು :  ಸ್ಥಳೀಯರ ವಿರೋಧಿ ನೀತಿಗಳಿಗೆ MRPL ನಾಯಕತ್ವ ; ತ‌ನ್ನ ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ಕಂಪನಿಯನ್ನು ಗಡಿಪಾರು ಮಾಡಬೇಕು : ಮುನೀರ್ ಕಾಟಿಪಳ್ಳ

ಮಂಗಳೂರು: ಉದ್ಯೋಗ ಸೃಷ್ಟಿಯ ಭರವಸೆ ನೀಡಿ ತುಳುನಾಡಿನ ಅಪಾರ ಜಮೀನು ಕಬಳಿಸಿರುವ ಬೃಹತ್ ಕೈಗಾರಿಕೆಗಳು ಪರಿಸರವನ್ನು ಎಗ್ಗಿಲ್ಲದೆ ನಾಶಪಡಿಸಿದೆ.‌

ನೆಲ ಜಲವನ್ನು ವಿಷಮಯಗೊಳಿಸಿದ್ದು ಸಾಲದು ಎಂಬಂತೆ ಕಂಪೆನಿಯ ಸುತ್ತಲ ರಸ್ತೆ, ಚರಂಡಿಗಳನ್ನು ಬಳಕೆಗೆ ಆಯೋಗ್ಯ ಮಾಡಿ ಬಿಟ್ಟಿವೆ. ಕೈಗಾರಿಕೆಗಳ ಇಂತಹ ಸ್ಥಳೀಯರ ವಿರೋಧಿ ನೀತಿಗಳಿಗೆ ಎಮ್ಆರ್ ಪಿಎಲ್ ನಾಯಕತ್ವ ನೀಡುತ್ತಿದೆ.

ಕಂಪೆನಿ ತ‌ನ್ನ ತಪ್ಪುಗಳನ್ನು ಸರಿಪಡಿಸದಿದ್ದಲ್ಲಿ ಎಮ್ಆರ್ ಪಿಎಲ್ ಅನ್ನು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತ ಪಡಿಸಿದರು.

ಕೂಳೂರು ಜೋಕಟ್ಟೆ ಎಸ್ಇಝಡ್ ಸಂಪರ್ಕದ ಎಮ್ಆರ್ ಪಿಎಲ್ ಕಂಪೆನಿಯ ಸುಪರ್ದಿಯಲ್ಲಿರುವ ಕಾರಿಡಾರ್ ರಸ್ತೆಯ ಹೊಂಡ ಗುಂಡಿ ಮುಚ್ಚಲು, ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ರುಚಿಗೋಲ್ಡ್ ಕಂಪೆನಿ ಮುಂಭಾಗ “ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ” ಹಮ್ಮಿಕೊಂಡಿದ್ದ ರಸ್ತೆ ತಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು‌.

ಕೂಳೂರು, ಎಸ್ಇಝಡ್ ರಸ್ತೆ ಈಗ ಎಮ್ಆರ್ ಪಿಎಲ್ ಅಧೀನದಲ್ಲಿ ಇದೆ. ಎಸ್ಇಝಡ್, ಅನಘ, ರುಚಿಗೋಲ್ಡ್, ಅದಾನಿ ವಿಲ್ಮಾ ಸಹಿತ ಹಲವು ಕೈಗಾರಿಕೆಗಳು ಈ ರಸ್ತೆಯನ್ನು ಬಳಸುತ್ತಿವೆ. ಆದರೆ ರಸ್ತೆ ಪೂರ್ತಿ ಹೊಂಡಮಯ ಆಗಿದ್ದರೂ ಕಂಪೆನಿಗಳಾಗಲಿ, ಜಿಲ್ಲಾಡಳಿತವಾಗಲಿ ಯಾವುದೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ‌.

ಇಲ್ಲಿಯ ಚರಂಡಿಗಳನ್ನು ಕಂಪೆನಿಗಳು ಅಕ್ರಮಿಸಿ ಮಣ್ಣು ತುಂಬಿಸಿದ್ದರೂ ಕೇಳುವವರಿಲ್ಲ. ಅದರಿಂದ ಕಂಪೆನಿಗಳ ಮಲಿನ ನೀರು ಆಳೆತ್ತರಕ್ಕೆ ನಿಂತು ರೋಗರೋಜಿನಗಳು ವ್ಯಾಪಕವಾಗಿ ಹರಡುತ್ತಿದೆ.

ಸಣ್ಣ ವಾಹನಗಳಲ್ಲಿ ಪ್ರಯಾಣಿಸುವ ಜನತೆ ರಸ್ತೆ ಹೊಂಡಕ್ಕೆ ಬಿದ್ದು ಕೈಕಾಲು ಮುರಿಸಿಕೊಳ್ಳುತ್ತಿದ್ದಾರೆ. ಹೊಂಡ ಗುಂಡಿ ಮುಚ್ಚಲು ಜಿಲ್ಲಾಡಳಿತ ತಕ್ಷಣ ಸರಿಯಾದ ಕ್ರಮ ಕೈಗೊಳ್ಳದಿದ್ದಲ್ಲಿ ಸ್ಥಳೀಯ ಕಂಪೆನಿಗಳಿಗೆ ಘೆರಾವ್ ಮಾಡುವುದಾಗಿ ಎಚ್ಚರಿಸಿದರು.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬಿ ಎಸ್ ಬಶೀರ್, ತೋಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆವಿನ್, ಹೋರಾಟ ಸಮಿತಿಯ ಸಂಚಾಲಕ, ಗ್ರಾಮ ಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಬಾವ,

ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರೆಸಿಲ್ಲಾ ಮೊಂತೆರೊ, ಮಾಜಿ ಉಪಾಧ್ಯಕ್ಷ ಸಂಸು ಇದ್ದಿನಬ್ಬ, ಹೋರಾಟ ಸಮಿತಿಯ ಪ್ರಮುಖರಾದ ಹನೀಫ್ ಜೋಕಟ್ಟೆ,

ಲಾನ್ಸಿ ಜೋಕಟ್ಟೆ, ಫಾರೂಕ್ ಕೆ ಬಿ ಎಸ್, ಇಕ್ಬಾಲ್ ಜೋಕಟ್ಟೆ, ಹಮೀದ್, ಶಂಸುದ್ದಿನ್ ಅರಿಕೆರೆ, ಇಸ್ಮಾಯಿಲ್ ಅಜಾದ್ ಮತ್ತಿತರರು ನಾಯಕತ್ವ ವಹಿಸಿದ್ದರು.

Vishwa News 24

Recent Posts

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ – vishwanews24

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…

11 minutes ago

ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…

21 minutes ago

ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ – vishwanews24

ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…

27 minutes ago

ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ – vishwanews24

ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…

31 minutes ago

ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ – vishwanews24

ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…

51 minutes ago

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಶಿವಮೊಗ್ಗ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ…

56 minutes ago