Featured

ಮಂಗಳೂರು : ಸ್ಮಾರ್ಟ್ ಸಿಟಿ – ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ–2022 : ರಸ್ತೆ ಗುಂಡಿ ಪೋಟೋ ಕ್ಲಿಕ್ಕಿಸಿ,, ಬಹುಮಾನ ಗೆಲ್ಲಿರಿ : ಐವನ್ ಡಿಸೋಜ – Vishwanews24

ಸ್ಮಾರ್ಟ್ ಸಿಟಿ– ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ–2022 : ರಸ್ತೆ ಗುಂಡಿ ಪೋಟೋ ಕ್ಲಿಕ್ಕಿಸಿ,, ಬಹುಮಾನ ಗೆಲ್ಲಿರಿ

ದೊಡ್ಡ ಮತ್ತು ಅಪಾಯಕಾರಿ ಗುಂಡಿಗಳನ್ನು ಗುರುತಿಸಿದವರಿಗೆ ಬಹುಮಾನ

ಚಿತ್ರ, ಸಣ್ಣ ವಿಡಿಯೊ ಹಾಗೂ ಜಿಪಿಎಸ್ ಲೊಕೇಷನ್ ಕಳುಹಿಸಲು ಮೊಬೈಲ್‌ ನಂ . 9731485875

ಪ್ರಥಮ ಬಹುಮಾನ (₹ 5,000

ದ್ವಿತೀಯ ಬಹುಮಾನ ₹ 3,000

ತೃತೀಯ ಬಹುಮಾನ 2,000

ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹೇಳಿಕೆ

ಮಂಗಳೂರು, : ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ ವಿರೋಧಿಸುವ ಜತೆಗೆ ಸರ್ಕಾರದ ಗಮನ ಸೆಳೆಯಲು ‘ಸ್ಮಾರ್ಟ್ ಸಿಟಿ– ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ–2022’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮಂಗಳವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಹಾನಗರ ವ್ಯಾಪ್ತಿಯಲ್ಲಿರುವ ದೊಡ್ಡ ಮತ್ತು ಅಪಾಯಕಾರಿ ಗುಂಡಿಗಳನ್ನು ಗುರುತಿಸಿದವರಿಗೆ ಬಹುಮಾನ ನೀಡುವ ಮೂಲಕ ಜನಜಾಗೃತಿ ಮೂಡಿಸಲು ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಆ.24ರಿಂದ 29ರ ಸಂಜೆ 5 ಗಂಟೆಯ ಒಳಗೆ 9731485875 ಈ ಮೊಬೈಲ್‌ ಫೋನ್ ಸಂಖ್ಯೆಗೆ ಚಿತ್ರ, ಸಣ್ಣ ವಿಡಿಯೊ ಹಾಗೂ ಜಿಪಿಎಸ್ ಲೊಕೇಷನ್ ಕಳುಹಿಸಬಹುದು.

ಪ್ರಥಮ ಬಹುಮಾನವನ್ನು ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ನೌಕರರ ಸಂಘದ ವತಿಯಿಂದ (₹ 5,000), ದ್ವಿತೀಯ ಬಹುಮಾನವನ್ನು ತ್ರಿಚಕ್ರ ಗೂಡ್ಸ್, ಟೆಂಪೊ ಮಾಲೀಕ, ಚಾಲಕರ ಸಂಘದ ವತಿಯಿಂದ (₹ 3,000), ತೃತೀಯ ಬಹುಮಾನವನ್ನು ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ, ಮಾಲೀಕರ ಪರವಾಗಿ (₹ 2,000) ನೀಡಲಾಗುವುದು’ ಎಂದರು.

ಗಿಲ್ಬರ್ಟ್ ಡಿಸೋಜ, ಮಹೇಶ್ ಕೋಡಿಕಲ್, ಅಬ್ದುಲ್ ಅಜೀಜ್ ಕುದ್ರೋಳಿ ಸ್ಪರ್ಧೆಯ ತೀರ್ಪುದಾರರಾಗಿದ್ದಾರೆ. ಆಯ್ಕೆಯಾದವರಿಗೆ ಆ.30ರಂದು ಮಧ್ಯಾಹ್ನ 3.30 ಗಂಟೆಗೆ ಪಾಲಿಕೆಯ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯ ಮುಂದೆ ಬಹುಮಾನ ವಿತರಿಸಲಾಗುವುದು ಎಂದರು. ಪ್ರಮುಖರಾದ ರಮಾನಂದ ಪೂಜಾರಿ, ಮಾರ್ಸೆಲ್ ಮೊಂತೆರೊ, ವಸಂತ ಶೆಟ್ಟಿ, ದೀಕ್ಷಿತ್ ಅತ್ತಾವರ, ಮೀನಾ ಟೆಲ್ಲಿಸ್ ಇದ್ದರು,.

ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ: ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

23 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago