Featured

ಮಂಗಳೂರು,: ಸ್ಮಾರ್ಟ್ ಸಿಟಿ ಯೋಜನೆ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗ : ಅಬ್ದುಲ್ ರವೂಫ್ ಆರೋಪ -Vishwanews24

ಮಂಗಳೂರು,: ಸ್ಮಾರ್ಟ್ ಸಿಟಿ ಯೋಜನೆ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗ : ಅಬ್ದುಲ್ ರವೂಫ್ ಆರೋಪ -Vishwanews24

ಮಂಗಳೂರು, : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ದೋಷ ಪೂರಿತ ಕಾಮಗಾರಿಗಳಿಂದ ಕೂಡಿದ್ದು, ಸಾರ್ವಜನಿಕ ಹಣದ ದುರುಪಯೋಗವಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ವಿಪಕ್ಷದ ಮುಖ್ಯ ಸಚೇತಕ ಅಬ್ದುಲ್ ರವೂಫ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆಯ ರಥಬೀದಿಯ ಬಳಿ ನಿರ್ಮಿಸಲಾದ ಕಾಂಕ್ರಿಟ್ ರಸ್ತೆ ನಿರ್ಮಾಣವಾದ ಎರಡು ತಿಂಗಳ ಒಳಗೆ ಬಿರುಕು ಬಿಟ್ಟಿದೆ. ಕೆಲವು ಕಡೆ ಬಿರುಕು ಬಿಟ್ಟ ಕಾಂಕ್ರಿಟ್ ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಕಾಮಗಾರಿಗಳ ಗುತ್ತಿಗೆ ನೀಡುವ ಸಂದರ್ಭದಲ್ಲೂ ಹಲವು ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದರು.

ಒಂದೂವರೆ ಕೋಟಿ ರೂ.ನ ಕಾಮಗಾರಿ ವ್ಯರ್ಥ:

ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪುರಭವನದ ಬಳಿಯ ನೆಹರು ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ಸುಮಾರು ಒಂದೂವರೆ ಕೋಟಿ ರೂ. ವ್ಯಯ ಮಾಡಲಾಗಿದೆ. ಆದರೆ ಈ ಮೈದಾನವನ್ನು ಫುಟ್ಬಾಲ್ ಮೈದಾನವಾಗಿ ಉಳಿಸಿಕೊಳ್ಳಬೇಕು, ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದ ಕೋಟ್ಯಂತರ ರೂ. ಸಾರ್ವಜನಿಕ ಹಣ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಪೋಲಾದಂತಾಗಿದೆ. ನಗರದ ವಿವಿಧ ಕಡೆ ನಡೆಯುತ್ತಿರುವ ಕಾಮಗಾರಿಗಳೂ ಸಮರ್ಪಕವಾಗಿಲ್ಲ ಎಂದು ಅಬ್ದುಲ್ ರವೂಫ್ ದೂರಿದರು.

http://ಈ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ : ಡಿಕೆ ಶಿವಕುಮಾರ್

ಮಂಗಳೂರು ನಗರದ ಕೆಲವೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತಗೊಂಡಿದೆ. ನಗರದ ಕೇಂದ್ರ ಸ್ಥಾನದಲ್ಲಿ ರುವ ವೆನ್ಲಾಕ್ ಆಸ್ಪತ್ರೆಯ ಬಳಿಯ ಕಾಮಗಾರಿಗಳು ಸ್ಥಗಿತಗೊಂಡಿರುವುದರಿಂದ ತುರ್ತು ಚಕಿತ್ಸೆಗೆ ಆಸ್ಪತ್ರೆಗೆ ಬರುವವರಿಗೂ ಸಮಸ್ಯೆ ಉಂಟಾಗುತ್ತಿದೆ. ಕೋಟ್ಯಂತರ ರೂ. ಮೊತ್ತವನ್ನು ಸ್ಮಾರ್ಟ್ ಸಿಟಿ ಯೋಜನೆಗೆ ವ್ಯಯ ಮಾಡುತ್ತಿರುವ ಸಂದರ್ಭದಲ್ಲಿ ನಿಯಮ ಗಳನ್ನು ಉಲ್ಲಂಘನೆ ಮಾಡುತ್ತಿರುವುದು ಈ ರೀತಿ ಸಾರ್ವಜನಿಕ ಹಣದ ದುರುಪಯೋಗ ಆಗುವುದಕ್ಕೆ ಕಾರಣವಾಗಿದೆ ಎಂದು ಅಬ್ದುಲ್ ರವೂಫ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯರಾದ ಶಶಿಧರ ಹೆಗ್ಡೆ, ಭಾಸ್ಕರ ಕೆ., ಲ್ಯಾನ್ಸ್ ಲೋಟ್ ಪಿಂಟೋ, ನವೀನ್ ಡಿಸೋಜ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಕೇಶವ ಮರೋಳಿ, ಝೀನತ್ ಸಂಶುದ್ದೀನ್ ಮೊದಲಾದವರು ಉಪಸ್ಥಿತರಿದ್ದರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago