ಮಂಗಳೂರು, : ಕುಳೂರು ಪ್ರದೇಶದ ನೂರಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.
ಕುಳೂರು ನಿವಾಸಿ ಅನಿಲ್ ಡೆವಿಡ್ ಅವರ ನೇತೃತ್ವದಲ್ಲಿ 120 ಮಂದಿ ಯುವಕರು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಭಾವಚಿತ್ರ ಮತ್ತು ಚುನಾವಣಾ ಚಿಣ್ನೆ ಇರುವ ಟೀ ಶರ್ಟ್ ಮತ್ತು ಟೊಪ್ಪಿಗಳನ್ನು ಧರಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಅವರಂತಹ ಯುವಕ, ವಿದ್ಯಾವಂತ ನಮ್ಮ ಜಿಲ್ಲೆಗೆ ಸಂಸದನಾಗಿ ಆಯ್ಕೆ ಆಗಬೇಕೆಂದು ತಾವೇ ಸ್ವಂತ ಹಣ ಖರ್ಚು ಮಾಡಿ ಮನೆ ಮನೆಗೆ ತೆರಳಿ ಮಿಥುನ್ ರೈ ಪ್ರ ಪ್ರಚಾರ ನಡೆಸುತ್ತಿದ್ದೇವೆ ಎಂದು ಪ್ರಚಾರ ತಂಡದ ಸುರೇಶ್ ತಿಳಿಸಿದ್ದಾರೆ.ಒಟ್ಟು ನಾಲ್ಕು ತಂಡಗಳನ್ನು ಮಾಡಿ ಮಿಥುನ್ ರೈ ಅವರ ಪರವಾಗಿ ಮತಯಾಚನೆ ಮಾಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಯುವಕರ ತಂಡ ಮನೆ ಮನೆ ಭೇಟಿ ನೀಡಿ, ಮಿಥುನ್ ರೈ ವಿದ್ಯಾವಂತ ಹಾಗೂ ಸುಸಂಸ್ಕೃತ ಕುಟುಂಬದ ಯುವಕ. ಮಂಗಳೂರಿನ ಸಮಗ್ರ ಅಭಿವೃದ್ದಿಗೆ ಮಿಥುನ್ ರೈ ಅತ್ಯುತ್ತಮ ಅಯ್ಕೆ. ಹಾಗಾಗಿ ಅವರನ್ನು ಪಕ್ಷಾತೀತವಾಗಿ ಮತದಾನ ಮಾಡಿ ಗೆಲ್ಲಿಸಬೇಕು ಎಂಬ ಬೇಡಿಕೆಯನ್ನು ಮತದಾರರ ಮುಂದಿಟ್ಟಿದ್ದಾರೆ.
ಈ ಹಿಂದೆ ನಡೆದಿದ್ದ ಲೋಕಸಭಾ ಚುಣಾವಣೆಯಲ್ಲಿ ಮೋದಿಯನ್ನು ಪ್ರಧಾನಿಯಾಗಿಸಬೇಕೆಂಬ ನಿಟ್ಟಿನಲ್ಲಿ ಕೆಲ ಯುವಕರು ನಮೋ ಬ್ರಿಗೇಡ್ ಎಂಬ ತಂಡ ಕಟ್ಟಿ ಪ್ರಚಾರ ನಡೆಸಿದ್ದರು. ಅದು ಭಾರಿ ಯಶಸ್ಸನ್ನು ತಂದು ಕೊಟ್ಟಿತ್ತು. ಈ ಬಾರಿ ಮತ್ತೊಂದು ಯುವಕರ ತಂಡ ಯುವ ನಾಯಕ ಮಿಥುನ್ ರೈ ಪರ ಪ್ರಚಾರಕ್ಕೆ ಧುಮುಕಿದೆ.
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು …
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ…
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ…