ಮಂಗಳೂರು, : ಕುಳೂರು ಪ್ರದೇಶದ ನೂರಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತರಾಗಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.
ಕುಳೂರು ನಿವಾಸಿ ಅನಿಲ್ ಡೆವಿಡ್ ಅವರ ನೇತೃತ್ವದಲ್ಲಿ 120 ಮಂದಿ ಯುವಕರು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಭಾವಚಿತ್ರ ಮತ್ತು ಚುನಾವಣಾ ಚಿಣ್ನೆ ಇರುವ ಟೀ ಶರ್ಟ್ ಮತ್ತು ಟೊಪ್ಪಿಗಳನ್ನು ಧರಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಅವರಂತಹ ಯುವಕ, ವಿದ್ಯಾವಂತ ನಮ್ಮ ಜಿಲ್ಲೆಗೆ ಸಂಸದನಾಗಿ ಆಯ್ಕೆ ಆಗಬೇಕೆಂದು ತಾವೇ ಸ್ವಂತ ಹಣ ಖರ್ಚು ಮಾಡಿ ಮನೆ ಮನೆಗೆ ತೆರಳಿ ಮಿಥುನ್ ರೈ ಪ್ರ ಪ್ರಚಾರ ನಡೆಸುತ್ತಿದ್ದೇವೆ ಎಂದು ಪ್ರಚಾರ ತಂಡದ ಸುರೇಶ್ ತಿಳಿಸಿದ್ದಾರೆ.ಒಟ್ಟು ನಾಲ್ಕು ತಂಡಗಳನ್ನು ಮಾಡಿ ಮಿಥುನ್ ರೈ ಅವರ ಪರವಾಗಿ ಮತಯಾಚನೆ ಮಾಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಯುವಕರ ತಂಡ ಮನೆ ಮನೆ ಭೇಟಿ ನೀಡಿ, ಮಿಥುನ್ ರೈ ವಿದ್ಯಾವಂತ ಹಾಗೂ ಸುಸಂಸ್ಕೃತ ಕುಟುಂಬದ ಯುವಕ. ಮಂಗಳೂರಿನ ಸಮಗ್ರ ಅಭಿವೃದ್ದಿಗೆ ಮಿಥುನ್ ರೈ ಅತ್ಯುತ್ತಮ ಅಯ್ಕೆ. ಹಾಗಾಗಿ ಅವರನ್ನು ಪಕ್ಷಾತೀತವಾಗಿ ಮತದಾನ ಮಾಡಿ ಗೆಲ್ಲಿಸಬೇಕು ಎಂಬ ಬೇಡಿಕೆಯನ್ನು ಮತದಾರರ ಮುಂದಿಟ್ಟಿದ್ದಾರೆ.
ಈ ಹಿಂದೆ ನಡೆದಿದ್ದ ಲೋಕಸಭಾ ಚುಣಾವಣೆಯಲ್ಲಿ ಮೋದಿಯನ್ನು ಪ್ರಧಾನಿಯಾಗಿಸಬೇಕೆಂಬ ನಿಟ್ಟಿನಲ್ಲಿ ಕೆಲ ಯುವಕರು ನಮೋ ಬ್ರಿಗೇಡ್ ಎಂಬ ತಂಡ ಕಟ್ಟಿ ಪ್ರಚಾರ ನಡೆಸಿದ್ದರು. ಅದು ಭಾರಿ ಯಶಸ್ಸನ್ನು ತಂದು ಕೊಟ್ಟಿತ್ತು. ಈ ಬಾರಿ ಮತ್ತೊಂದು ಯುವಕರ ತಂಡ ಯುವ ನಾಯಕ ಮಿಥುನ್ ರೈ ಪರ ಪ್ರಚಾರಕ್ಕೆ ಧುಮುಕಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…