Featured

ಮಂಗಳೂರು : ಹಂತಕರು ಯಾವುದೇ ಸಂಘಟನೆ, ವ್ಯಕ್ತಿ, ಸಿದ್ಧಾಂತದವರು ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ : ಡಿಜಿಪಿ ಪ್ರವೀಣ್ ಸೂದ್ – Vishwanews24

ಮಂಗಳೂರು : ಹಂತಕರು ಯಾವುದೇ ಸಂಘಟನೆ, ವ್ಯಕ್ತಿ, ಸಿದ್ಧಾಂತದವರು ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ : ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಯಾವುದೇ ಪ್ರಕರಣವಿದ್ದರೂ ಅದರ ಬಗ್ಗೆ ಕೆಲವು ನಾಗರಿಕರಿಗೆ ಮಾಹಿತಿ ಇರುತ್ತದೆ. ಅಂಥವರು ಮುಂದೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರೆ ಪ್ರಕರಣ ಬೇಧಿಸಲು ಸುಲಭವಾಗುತ್ತದೆ. ಮಾಹಿತಿ ನೀಡದಿದ್ದಲ್ಲಿ ಅವರೂ ಇದರಲ್ಲಿ ಭಾಗಿದಾರರೆಂದು ನಾವು ತಿಳಿಯಬೇಕಾಗುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು.

ಮಂಗಳೂರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರಷ್ಟೇ ನಾಗರಿಕರ ಜವಾಬ್ದಾರಿಯೂ ಇದೆ. ಆದ್ದರಿಂದ ಎಲ್ಲಾ ಸಮುದಾಯಗಳ, ಸಂಘಟನೆಗಳ ಮುಖಂಡರು ಪೊಲೀಸರೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಮಸೂದ್ ಹಂತಕರಲ್ಲಿ ಎಂಟು ಮಂದಿಯ ಬಂಧನವಾಗಿದೆ. ಪ್ರವೀಣ್ ಹಂತಕರಿಬ್ಬರ ಬಂಧನವಾಗಿದ್ದು, ತನಿಖೆ ಮುಂದಿವರಿದಿದೆ. ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತೇವೆ. ಫಾಝಿಲ್ ಹತ್ಯೆ ಪ್ರಕರಣದಲ್ಲೂ ಈಗಾಗಲೇ ಹಂತಕರು ಬಳಸಿರುವ ಕಾರು ಪತ್ತೆಯಾಗಿದ್ದು, ಕಾರು ಮಾಲಕನನ್ನೂ ವಶಪಡಿಸಿಕೊಳ್ಳಲಾಗಿದೆ. ಆತನ ಮೂಲಕ ಉಳಿದ ಆರೋಪಿಗಳನ್ನೂ ಬಂಧಿಸಲಾಗುತ್ತದೆ. ಸದ್ಯದಲ್ಲೇ ಮೂರೂ ಪ್ರಕರಣವನ್ನು ಬೇಧಿಸಲಾಗುತ್ತದೆ ಎಂದು ಪ್ರವೀಣ್ ಸೂದ್ ಹೇಳಿದರು.

ಐಜಿ, ದ.ಕ.ಜಿಲ್ಲಾ ಎಸ್ಪಿ, ಮಂಗಳೂರು ಪೊಲೀಸ್ ಕಮಿಷನರ್, ಡಿಸಿಯರೊಂದಿಗೆ ಚರ್ಚಿಸಿ ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸವಿವರವಾಗಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಗಡಿ ಪ್ರದೇಶದಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗುತ್ತದೆ. ಅದರೊಂದಿಗೆ ದ.ಕ.ಜಿಲ್ಲೆಯಲ್ಲಿ ಪೊಲೀಸ್ ಬಲ ಕಡಿಮೆಯಿದ್ದು, ಅದನ್ನು ಹೆಚ್ಚು ಮಾಡಲು ಸಿಎಂ ಜೊತೆಗೆ ಮಾತನಾಡಿದ್ದೇನೆ ಎಂದು ಹೇಳಿದರು.

ದ.ಕ.ಜಿಲ್ಲೆಯಲ್ಲಿ ನಡೆದಿರುವ ಮೂರು ಪ್ರಕರಣಗಳಲ್ಲೂ ಹಂತಕರನ್ನು ಬಂಧಿಸಲಾಗುವುದು. ಯಾವುದೇ ಸಂಘಟನೆ, ವ್ಯಕ್ತಿ, ಸಿದ್ಧಾಂತದವರು ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ‌ ಎಂದರು

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago