Featured

ಮಂಗಳೂರು:  ಹಗರಣದಲ್ಲಿ ಭಾಗಿಯಾಗಿ ವಿವಿಯು ತನ್ನ ಶ್ರೇಷ್ಠ ಘನತೆ ಕಳೆದುಕೊಂಡಿದೆ :  ಶಾಸಕ ವೇದವ್ಯಾಸ್ ಕಾಮತ್ – Vishwanews24

ಮಂಗಳೂರು:  ಹಗರಣದಲ್ಲಿ ಭಾಗಿಯಾಗಿ ವಿವಿಯು ತನ್ನ ಶ್ರೇಷ್ಠ ಘನತೆ ಕಳೆದುಕೊಂಡಿದೆ :  ಶಾಸಕ ಕಾಮತ್

ಮಂಗಳೂರು: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಕೊಚಿಮುಲ್ ಅಕ್ರಮ ನೇಮಕಾತಿಗೆ ಸಂಬಂಧಿಸಿ ಪರೀಕ್ಷೆ ಹಾಗೂ ಮೌಲ್ಯಮಾಪನವನ್ನು ನಡೆಸಿದ್ದ ಮಂಗಳೂರು ವಿಶ್ವವಿದ್ಯಾಲಯ ಈ ಅಕ್ರಮದಲ್ಲಿ ಭಾಗಿಯಾದ ಖಚಿತ ಮಾಹಿತಿ ಮೇರೆಗೆ ವಿವಿ ಯ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿಗೆ ಇ.ಡಿ ದಾಳಿ ನಡೆಸಿ, ನೇಮಕಾತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಕೆಲ ವರ್ಷಗಳ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಬಗ್ಗೆ ರಾಜ್ಯ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಅತ್ಯುತ್ತಮ ಅಭಿಪ್ರಾಯವಿದ್ದು ವಿದೇಶಗಳಿಂದಲೂ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದರು. ಆನಂತರದ ದಿನಗಳಲ್ಲಿ ಇಲ್ಲಿನ ಆಯಕಟ್ಟಿನ ಹುದ್ದೆಗೇರಿದ ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ವಿಶ್ವವಿದ್ಯಾಲಯದ ಘನತೆಗೆ ಮಸಿ ಬಳಿದಿದ್ದಾರೆ. ಹೀಗಾಗಿ ವಿವಿ ತನ್ನ “ಎ ಗ್ರೇಡ್” ಮಾನ್ಯತೆಯಿಂದ “ಬಿ ಗ್ರೇಡ್” ಮಾನ್ಯತೆಗೆ ಇಳಿದಿದ್ದು ಇಂತಹ ಅಕ್ರಮಗಳಿಂದ ವಿವಿಯ ಘನತೆಗೆ ಇನ್ನಷ್ಟು ಕುತ್ತುಂಟಾಗುತ್ತಿದೆ. ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರೂ ಈ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಯಾಗಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕೆಂದು ಶಾಸಕರು ಒತ್ತಾಯಿಸಿದರು.

ಹಲವು ಸಮಯಗಳಿಂದ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡದ್ದು, ಫಲಿತಾಂಶ ಅದಲು ಬದಲಾಗಿದ್ದು, ವರ್ಷಗಟ್ಟಲೆ ಅಂಕಪಟ್ಟಿಯನ್ನು ವಿತರಿಸದೇ ಪ್ರತಿನಿತ್ಯ ವಿದ್ಯಾರ್ಥಿಗಳು ವಿ.ವಿ ಗೆ ಅಲೆಯುತ್ತಿರುವುದು, ವಿವಿಯ ತಾತ್ಕಾಲಿಕ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೇ ಇರುವುದು ಸೇರಿದಂತೆ ಹಲವಾರು ಪ್ರಕರಣಗಳು ನಡೆಯುತ್ತಿದ್ದರೂ ಎಚ್ಚೆತ್ತುಕೊಳ್ಳದ ವಿವಿ ವಿರುದ್ಧ ಸಹಜವಾಗಿಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಂತಹ ವಿದ್ಯಾರ್ಥಿ ಸಂಘಟನೆಗಳು ನ್ಯಾಯಕ್ಕಾಗಿ ಬೀದಿಗಿಳಿದಿವೆ ಎಂದು ಹೇಳಿದರು.

Vishwa News 24

Recent Posts

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 hour ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

4 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

4 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

7 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

7 hours ago