Featured

ಮಂಗಳೂರು : ಹನಿ ಟ್ರ್ಯಾಪ್ ಪ್ರಕರಣ : ನಾಲ್ವರ ಬಂಧನ -Vishwanews24

ಮಂಗಳೂರು : ಹನಿ ಟ್ರ್ಯಾಪ್ ಪ್ರಕರಣ : ನಾಲ್ವರ ಬಂಧನ -Vishwanews24

ಮಂಗಳೂರು, : ಕೇರಳ ಮೂಲದ ಯುವಕನಿಗೆ ಮಂಗಳೂರಿನ ಯುವತಿಯರಿಂದ ಹನಿಟ್ರ್ಯಾಪ್ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರೇಷ್ಮಾ,ಮಹಮ್ಮದ್ ಇಕ್ಬಾಲ್, ಜೀನತ್ ಮತ್ತು ಅಬ್ದುಲ್ ಖಾದರ್ ನಾಜೀಪ್ ಎಂದು ಗುರುತಿಸಲಾಗಿದೆ.

ಜನವರಿ 16ರಂದು ಸಾಮಾಜಿಕ ಜಾಲತಾಣದ ಮೂಲಕ ಕೇರಳ ಮೂಲದವರನ್ನು ಇದೇ ರೀತಿ ಬ್ಲಾಕ್ ಮೇಲ್ ಮಾಡಿ ಅವರಿಂದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಅವರು ನೀಡಿದ ದೂರಿನ ಅನ್ವಯ ಸುರತ್ಕಲ್ ಪೋಲಿಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂದಿಸಿರುತ್ತಾರೆ. ಬಂಧಿತ ಆರೋಪಿಗಳಿಂದ ಮೊಬೈಲ್ ಫೋನ್, ನಗದು ಹಣ, ಕೃತ್ಯಕ್ಕೆ ಉಪಯೋಗಿಸಿದ ಆಯುಧ ಹಾಗೂ ವಾಹನವನ್ನು ವಶಪಡಿಸಿರುತ್ತಾರೆ.

ಆರೋಪಿ ಜೀನತ್ ಹಾಗೂ ಅವರ ಗಂಡ ಆರೋಪಿ ಇಕ್ವಾಲ್ ರವರು ಕಾನ-ಕಟ್ಟಾ ಪರಿಸರದ ಫ್ಲೋರೆಂಟೈನ್ ಅಪಾರ್ಟೈಂಟ್ಸ್ ನಲ್ಲಿ ವಾಸ್ತವ್ಯ ಇದ್ದು ಆರೋಪಿ ಶ್ರೀ ನಾಸಿಫ್ ಸೂರಿಂಜೆ ಮೂಲದವನಾಗಿದ್ದು ಪ್ರಸ್ತುತ ಚೊಕ್ಕಬೆಟ್ಟು ಪರಿಸರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡಿಕೊಂಡಿರುತ್ತಾರೆ. ಇವರು ಈ ಹಿಂದೆಯು ಕೂಡ ಮಂಗಳೂರು ಮತ್ತು ಆರೋಪಿಗಳ ಸ್ವಂತ ನಿವಾಸದಲ್ಲಿ ಕೇರಳ ಮೂಲದವರನ್ನು ಕರೆಸಿ ಇದೇ ರೀತಿಯ ಕೃತ್ಯ ಮಾಡಿಕೊಂಡು ಸುಮಾರು ಐದಾರು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿರುತ್ತದೆ ಮತ್ತು ಇವರ ಹಿಂದೆ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಪೋಲಿಸರು ಮಾಹಿತಿ ಕಲೆ ಹಾಕಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ಮೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್ ಐ.ಪಿ.ಎಸ್ (ಕಾ&ಸು) ಮತ್ತು ಉಪ ಪೊಲೀಸ್ ಆಯುಕ್ತರಾದ ಶ್ರೀ ವಿನಯ್ ಗಾಂವ್ಕರ್ (ಅಪರಾಧ & ಸಂಚಾರ) ರವರ ನಿರ್ದೇಶನದಂತೆ ಸಹಾಯಕ ಮೊಲೀಸ್ ಆಯುಕ್ತರು, ಉತ್ತರ ಉಪವಿಭಾಗ ಶ್ರೀ ಬೆಳ್ಯಪ್ಪ ಮತ್ತು ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಚಂದ್ರಪ್ಪ ಕೆ, ಮತ್ತು ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago