ಮಂಗಳೂರು: ಕರಾವಳಿ ಬೆಡಗಿ, ʼಕೆಜಿಎಫ್ʼ ನಟಿ ಶ್ರೀನಿಧಿ ಶೆಟ್ಟಿ ದೈವಕೋಲದಲ್ಲಿ ಭಾಗಿಯಾಗಿ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ.
ದಕ್ಷಿಣ ಕನ್ನಡದ ಹೊರವಲಯದ ಕಿನ್ನಿಗೋಳಿಯಲ್ಲಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ನಡೆದ ಹರಕೆಯ ನೇಮೋತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ.
ಈ ಹಿಂದೆ ಶ್ರೀನಿಧಿ ಶೆಟ್ಟಿ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿಕೊಂಡಿದ್ದರು. ಅದರಂತೆ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗುತ್ತುವಿನಲ್ಲಿ ಜಾರಂದಾಯ ಮತ್ತು ಪರಿಹಾರ ದೈವಗಳ ನೇಮೋತ್ಸವ ನಡೆಯಿತು.
ಈ ನೇಮೋತ್ಸವದಲ್ಲಿ ನಟಿಯ ಕುಟುಂಬಸ್ಥರು ಸೇರಿದಂತೆ, ಸಂಬಂಧಿಕರು ಪಾಲ್ಗೊಂಡಿದ್ದಾರೆ. ಹೊತ್ತುಕೊಂಡ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ.
ಈ ವೇಳೆ ದೈವ ಶ್ರೀನಿಧಿ ಶೆಟ್ಟಿಗೆ ʼನೀನು ಇನ್ನಷ್ಟು ಎತ್ತರಕ್ಕೆ ಏರುತ್ತೀಯʼ ಎಂದು ಅಭಯ ನೀಡಿದೆ.
ರಾಕಿಂಗ್ ಸ್ಟಾರ್ ಯಶ್ ಅವರ ʼಕೆಜಿಎಫ್ 1,2ʼ ನಲ್ಲಿ ಮಿಂಚಿರುವ ಶ್ರೀನಿಧಿಗೆ ಆ ಬಳಿಕ ಹತ್ತಾರು ಆಫರ್ ಗಳು ಬಂದಿವೆ. ಸದ್ಯ ಅವರು ಕಿಚ್ಚ ಸುದೀಪ್ ಅವರ 47ನೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಆರಂಭಗೊಳ್ಳಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…