Featured

ಮಂಗಳೂರು: ಹರಕೆಯ ನೇಮೋತ್ಸವ ನೆರವೇರಿಸಿದ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ – Vishwanews24

ಮಂಗಳೂರು: ಹರಕೆಯ ನೇಮೋತ್ಸವವನ್ನು ನೆರವೇರಿಸಿದ ಕರಾವಳಿ ಬೆಡಗಿ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ

ಮಂಗಳೂರು: ಕರಾವಳಿ ಬೆಡಗಿ, ʼಕೆಜಿಎಫ್‌ʼ ನಟಿ ಶ್ರೀನಿಧಿ ಶೆಟ್ಟಿ ದೈವಕೋಲದಲ್ಲಿ ಭಾಗಿಯಾಗಿ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ.

ದಕ್ಷಿಣ ಕನ್ನಡದ ಹೊರವಲಯದ ಕಿನ್ನಿಗೋಳಿಯಲ್ಲಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ನಡೆದ ಹರಕೆಯ ನೇಮೋತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ.

ಈ ಹಿಂದೆ ಶ್ರೀನಿಧಿ ಶೆಟ್ಟಿ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿಕೊಂಡಿದ್ದರು. ಅದರಂತೆ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗುತ್ತುವಿನಲ್ಲಿ ಜಾರಂದಾಯ ಮತ್ತು ಪರಿಹಾರ ದೈವಗಳ ನೇಮೋತ್ಸವ ನಡೆಯಿತು.

 

ಈ ನೇಮೋತ್ಸವದಲ್ಲಿ ನಟಿಯ ಕುಟುಂಬಸ್ಥರು ಸೇರಿದಂತೆ, ಸಂಬಂಧಿಕರು ಪಾಲ್ಗೊಂಡಿದ್ದಾರೆ. ಹೊತ್ತುಕೊಂಡ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ.

ಈ ವೇಳೆ ದೈವ ಶ್ರೀನಿಧಿ ಶೆಟ್ಟಿಗೆ ʼನೀನು ಇನ್ನಷ್ಟು ಎತ್ತರಕ್ಕೆ ಏರುತ್ತೀಯʼ ಎಂದು ಅಭಯ ನೀಡಿದೆ.

ರಾಕಿಂಗ್‌ ಸ್ಟಾರ್‌ ಯಶ್‌ ಅವರ ʼಕೆಜಿಎಫ್ 1,2ʼ ನಲ್ಲಿ ಮಿಂಚಿರುವ ಶ್ರೀನಿಧಿಗೆ ಆ ಬಳಿಕ ಹತ್ತಾರು ಆಫರ್‌ ಗಳು ಬಂದಿವೆ. ಸದ್ಯ ಅವರು ಕಿಚ್ಚ ಸುದೀಪ್‌ ಅವರ 47ನೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago