Featured

ಮಂಗಳೂರು: ಹರಕೆಯ ನೇಮೋತ್ಸವ ನೆರವೇರಿಸಿದ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ – Vishwanews24

ಮಂಗಳೂರು: ಹರಕೆಯ ನೇಮೋತ್ಸವವನ್ನು ನೆರವೇರಿಸಿದ ಕರಾವಳಿ ಬೆಡಗಿ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ

ಮಂಗಳೂರು: ಕರಾವಳಿ ಬೆಡಗಿ, ʼಕೆಜಿಎಫ್‌ʼ ನಟಿ ಶ್ರೀನಿಧಿ ಶೆಟ್ಟಿ ದೈವಕೋಲದಲ್ಲಿ ಭಾಗಿಯಾಗಿ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ.

ದಕ್ಷಿಣ ಕನ್ನಡದ ಹೊರವಲಯದ ಕಿನ್ನಿಗೋಳಿಯಲ್ಲಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ನಡೆದ ಹರಕೆಯ ನೇಮೋತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ.

ಈ ಹಿಂದೆ ಶ್ರೀನಿಧಿ ಶೆಟ್ಟಿ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿಕೊಂಡಿದ್ದರು. ಅದರಂತೆ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗುತ್ತುವಿನಲ್ಲಿ ಜಾರಂದಾಯ ಮತ್ತು ಪರಿಹಾರ ದೈವಗಳ ನೇಮೋತ್ಸವ ನಡೆಯಿತು.

 

ಈ ನೇಮೋತ್ಸವದಲ್ಲಿ ನಟಿಯ ಕುಟುಂಬಸ್ಥರು ಸೇರಿದಂತೆ, ಸಂಬಂಧಿಕರು ಪಾಲ್ಗೊಂಡಿದ್ದಾರೆ. ಹೊತ್ತುಕೊಂಡ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ.

ಈ ವೇಳೆ ದೈವ ಶ್ರೀನಿಧಿ ಶೆಟ್ಟಿಗೆ ʼನೀನು ಇನ್ನಷ್ಟು ಎತ್ತರಕ್ಕೆ ಏರುತ್ತೀಯʼ ಎಂದು ಅಭಯ ನೀಡಿದೆ.

ರಾಕಿಂಗ್‌ ಸ್ಟಾರ್‌ ಯಶ್‌ ಅವರ ʼಕೆಜಿಎಫ್ 1,2ʼ ನಲ್ಲಿ ಮಿಂಚಿರುವ ಶ್ರೀನಿಧಿಗೆ ಆ ಬಳಿಕ ಹತ್ತಾರು ಆಫರ್‌ ಗಳು ಬಂದಿವೆ. ಸದ್ಯ ಅವರು ಕಿಚ್ಚ ಸುದೀಪ್‌ ಅವರ 47ನೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago