Featured

ಮಂಗಳೂರು: ಹರಕೆಯ ನೇಮೋತ್ಸವ ನೆರವೇರಿಸಿದ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ – Vishwanews24

ಮಂಗಳೂರು: ಹರಕೆಯ ನೇಮೋತ್ಸವವನ್ನು ನೆರವೇರಿಸಿದ ಕರಾವಳಿ ಬೆಡಗಿ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ

ಮಂಗಳೂರು: ಕರಾವಳಿ ಬೆಡಗಿ, ʼಕೆಜಿಎಫ್‌ʼ ನಟಿ ಶ್ರೀನಿಧಿ ಶೆಟ್ಟಿ ದೈವಕೋಲದಲ್ಲಿ ಭಾಗಿಯಾಗಿ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ.

ದಕ್ಷಿಣ ಕನ್ನಡದ ಹೊರವಲಯದ ಕಿನ್ನಿಗೋಳಿಯಲ್ಲಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ನಡೆದ ಹರಕೆಯ ನೇಮೋತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ.

ಈ ಹಿಂದೆ ಶ್ರೀನಿಧಿ ಶೆಟ್ಟಿ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿಕೊಂಡಿದ್ದರು. ಅದರಂತೆ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗುತ್ತುವಿನಲ್ಲಿ ಜಾರಂದಾಯ ಮತ್ತು ಪರಿಹಾರ ದೈವಗಳ ನೇಮೋತ್ಸವ ನಡೆಯಿತು.

 

ಈ ನೇಮೋತ್ಸವದಲ್ಲಿ ನಟಿಯ ಕುಟುಂಬಸ್ಥರು ಸೇರಿದಂತೆ, ಸಂಬಂಧಿಕರು ಪಾಲ್ಗೊಂಡಿದ್ದಾರೆ. ಹೊತ್ತುಕೊಂಡ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ.

ಈ ವೇಳೆ ದೈವ ಶ್ರೀನಿಧಿ ಶೆಟ್ಟಿಗೆ ʼನೀನು ಇನ್ನಷ್ಟು ಎತ್ತರಕ್ಕೆ ಏರುತ್ತೀಯʼ ಎಂದು ಅಭಯ ನೀಡಿದೆ.

ರಾಕಿಂಗ್‌ ಸ್ಟಾರ್‌ ಯಶ್‌ ಅವರ ʼಕೆಜಿಎಫ್ 1,2ʼ ನಲ್ಲಿ ಮಿಂಚಿರುವ ಶ್ರೀನಿಧಿಗೆ ಆ ಬಳಿಕ ಹತ್ತಾರು ಆಫರ್‌ ಗಳು ಬಂದಿವೆ. ಸದ್ಯ ಅವರು ಕಿಚ್ಚ ಸುದೀಪ್‌ ಅವರ 47ನೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago