ಮಂಗಳೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಬೆನ್ನಲ್ಲೇ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಅಪಸ್ವರ ಕೇಳಿಬಂದಿದೆ.
ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ನಡೆದಿತ್ತು. ನೇಮೋತ್ಸವ ಆರಂಭಕ್ಕೂ ಮುನ್ನ ದೈವಸ್ಥಾನದಲ್ಲಿ ದೈವ ಎಣ್ಣೆಬೂಳ್ಯ ನೀಡುವ ವಾಡಿಕೆ ಸಂಪ್ರದಾಯವಿದೆ. ಈ ವೇಳೆ ದೈವ ನರ್ತಕರು ತುಳುನಾಡಿನ ದೈವಾರಾಧನೆ ಸಂಪ್ರದಾಯ ಮೀರಿ ವರ್ತಿಸಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.
ನಟ ರಿಷಬ್ ಶೆಟ್ಟಿಯ ಎರಡೂ ಕಾಂತಾರ ಸಿನಿಮಾಗಳಲ್ಲಿ ಮಾರ್ಗದರ್ಶಕರಾಗಿದ್ದವರೇ ಹರಕೆ ನೇಮೋತ್ಸವದ ವೇಳೆ ಎಣ್ಣೆಬೂಳ್ಯ ಸ್ವೀಕರಿಸಿದ್ದರು. ಈ ವೇಳೆ ದೈವ ನಟ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ಭಾವುಕ ಸನ್ನಿವೇಶ ನಡೆದಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತುಳುನಾಡ ದೈವಾರಾಧಕರ ಪರ-ವಿರೋಧ ಚರ್ಚೆ ನಡೆದಿದೆ. ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ದೈವ ನರ್ತನ ನಿಯಮ ಮೀರಿ ವರ್ತಿಸಬಾರದು. ದೈವಾರಾಧನೆಯ ಕಟ್ಟಲೆಗಳನ್ನು ಮೀರಿ ದೈವ ಕೋಲದ ಸಂಪ್ರದಾಯ ಮರೆತು ವರ್ತಿಸಿದ್ದಾರೆ. ಸದ್ಯ ದೈವ ನರ್ತಕರ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…