ಮಂಗಳೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಬೆನ್ನಲ್ಲೇ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಅಪಸ್ವರ ಕೇಳಿಬಂದಿದೆ.
ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ನಡೆದಿತ್ತು. ನೇಮೋತ್ಸವ ಆರಂಭಕ್ಕೂ ಮುನ್ನ ದೈವಸ್ಥಾನದಲ್ಲಿ ದೈವ ಎಣ್ಣೆಬೂಳ್ಯ ನೀಡುವ ವಾಡಿಕೆ ಸಂಪ್ರದಾಯವಿದೆ. ಈ ವೇಳೆ ದೈವ ನರ್ತಕರು ತುಳುನಾಡಿನ ದೈವಾರಾಧನೆ ಸಂಪ್ರದಾಯ ಮೀರಿ ವರ್ತಿಸಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.
ನಟ ರಿಷಬ್ ಶೆಟ್ಟಿಯ ಎರಡೂ ಕಾಂತಾರ ಸಿನಿಮಾಗಳಲ್ಲಿ ಮಾರ್ಗದರ್ಶಕರಾಗಿದ್ದವರೇ ಹರಕೆ ನೇಮೋತ್ಸವದ ವೇಳೆ ಎಣ್ಣೆಬೂಳ್ಯ ಸ್ವೀಕರಿಸಿದ್ದರು. ಈ ವೇಳೆ ದೈವ ನಟ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ಭಾವುಕ ಸನ್ನಿವೇಶ ನಡೆದಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತುಳುನಾಡ ದೈವಾರಾಧಕರ ಪರ-ವಿರೋಧ ಚರ್ಚೆ ನಡೆದಿದೆ. ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ದೈವ ನರ್ತನ ನಿಯಮ ಮೀರಿ ವರ್ತಿಸಬಾರದು. ದೈವಾರಾಧನೆಯ ಕಟ್ಟಲೆಗಳನ್ನು ಮೀರಿ ದೈವ ಕೋಲದ ಸಂಪ್ರದಾಯ ಮರೆತು ವರ್ತಿಸಿದ್ದಾರೆ. ಸದ್ಯ ದೈವ ನರ್ತಕರ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…