Featured

ಮಂಗಳೂರು: ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ – vishwanews24

ಮಂಗಳೂರು: ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಮಂಗಳೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಬೆನ್ನಲ್ಲೇ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ವೇಳೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಅಪಸ್ವರ ಕೇಳಿಬಂದಿದೆ.

ನಟ ರಿಷಬ್ ಶೆಟ್ಟಿ  ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ನಡೆದಿತ್ತು. ನೇಮೋತ್ಸವ ಆರಂಭಕ್ಕೂ ಮುನ್ನ ದೈವಸ್ಥಾನದಲ್ಲಿ ದೈವ ಎಣ್ಣೆಬೂಳ್ಯ ನೀಡುವ ವಾಡಿಕೆ ಸಂಪ್ರದಾಯವಿದೆ. ಈ ವೇಳೆ ದೈವ ನರ್ತಕರು ತುಳುನಾಡಿನ ದೈವಾರಾಧನೆ ಸಂಪ್ರದಾಯ ಮೀರಿ ವರ್ತಿಸಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.

ನಟ ರಿಷಬ್ ಶೆಟ್ಟಿಯ ಎರಡೂ ಕಾಂತಾರ ಸಿನಿಮಾಗಳಲ್ಲಿ ಮಾರ್ಗದರ್ಶಕರಾಗಿದ್ದವರೇ ಹರಕೆ ನೇಮೋತ್ಸವದ ವೇಳೆ ಎಣ್ಣೆಬೂಳ್ಯ ಸ್ವೀಕರಿಸಿದ್ದರು. ಈ ವೇಳೆ ದೈವ ನಟ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದ ಭಾವುಕ ಸನ್ನಿವೇಶ ನಡೆದಿತ್ತು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತುಳುನಾಡ ದೈವಾರಾಧಕರ ಪರ-ವಿರೋಧ ಚರ್ಚೆ ನಡೆದಿದೆ. ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ದೈವ ನರ್ತನ ನಿಯಮ ಮೀರಿ ವರ್ತಿಸಬಾರದು. ದೈವಾರಾಧನೆಯ ಕಟ್ಟಲೆಗಳನ್ನು ಮೀರಿ ದೈವ ಕೋಲದ ಸಂಪ್ರದಾಯ ಮರೆತು ವರ್ತಿಸಿದ್ದಾರೆ. ಸದ್ಯ ದೈವ ನರ್ತಕರ ನಡೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago