ಮಂಗಳೂರು: ಯುಗಾದಿ ಸಂದರ್ಭದಲ್ಲಿ ಆರಂಭವಾಗಿದ್ದ ಹಲಾಲ್ ಕಟ್ ಅಭಿಯಾನ ಇದೀಗ ದೀಪಾವಳಿ ಹಬ್ಬಕ್ಕೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ.
ಹಿಂದೂ ಸಂಘಟನೆಯ ಕರೆಯ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಅ.18ರಂದು ಹಿಂದೂ ಜನ ಜಾಗೃತಿ ಸಮಿತಿ ಹಲಾಲ್ ಕಟ್ ಅಭಿಯಾನ ಆರಂಭಿಸಿದೆ.
ಜಿಲ್ಲಾಧಿಕಾರಿ ಕಚೇರಿ ಸಮ್ಮುಖದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಹಿಂದೂ ಜನ ಜಾಗೃತಿ ಸಮಿತಿ, ದೀಪಾವಳಿಗೆ ಹಲಾಲ್ ಸರ್ಟಿಫೈಡ್ ವಸ್ತುಗಳನ್ನು ಬಳಸಲು ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಹಿಂದೂ ಸಂಘಟನೆಗಳು, ಇಂದಿನಿಂದ ಪ್ರತಿ ಜಿಲ್ಲೆಯಲ್ಲಿ ಅಭಿಯಾನ ನಡೆಸುವಂತೆ ಕರೆ ಕೊಟ್ಟಿದ್ದವು. ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸದಂತೆ ಜನರಲ್ಲಿ ಜಾಗೃತಿ ಮೂಡಿಸಲು ಹಿಂದೂ ಜನ ಜಾಗೃತಿ ವೇದಿಕೆ ಮುಂದಾಗಿದೆ.
ಹಿಂದೂಗಳು ಹಲಾಲ್ ಸರ್ಟಿಫೈಡ್ ನ ಯಾವ ವಸ್ತುಗಳನ್ನೂ (ಮಾಂಸ, ಸೌಂದರ್ಯ ವರ್ಧಕ ವಸ್ತು, ಧಾನ್ಯ, ಹಣ್ಣು, ಔಷಧ) ದೀಪಾವಳಿ ಸಂದರ್ಭದಲ್ಲಿ ಬಳಕೆ ಮಾಡಬಾರದು ಎಂದು ಹಿಂದೂ ಜನಜಾಗೃತಿಯ ಮುಖಂಡರು ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…