ಮಂಗಳೂರು: ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್ -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ನಡೆದಿದೆ.
ಚಂದ್ರಾವತಿ (70) ಅವರು ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ.
ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ ರೈಲು ಸಂಚರಿಸುವುದರಲ್ಲಿತ್ತು. ಇದನ್ನು ತಕ್ಷಣವೇ ಗಮನಿಸಿದ ಚಂದ್ರಾವತಿ ಅವರು ಮನೆಯಲ್ಲಿದ್ದ ಕೆಂಪು ವಸ್ತ್ರವನ್ನು ತಂದು ರೈಲು ಬರುವ ಸಮಯಕ್ಕೆ ಪ್ರದರ್ಶಿಸಿ ಲೋಕೋಪೈಲೆಟ್ ಅವರ ಗಮನ ಸೆಳೆದಿದ್ದಾರೆ.
ಇನ್ನು ಅಪಾಯ ಅರಿತ ಲೋಕೋಪೈಲೆಟ್ ರೈಲಿನ ವೇಗವನ್ನು ಕಡಿಮೆ ಮಾಡಿ ರೈಲನ್ನು ನಿಲ್ಲಿಸುವ ಮೂಲಕ ಸಂಭಾವ್ಯ ಅನಾಹುತ ತಪ್ಪಿಸಿದ್ದು, ಬಳಿಕ ಸ್ಥಳೀಯರು ಹಾಗೂ ರೈಲ್ವೇ ಇಲಾಖೆಯ ಕೆಲವರು ಸೇರಿ ಮರ ತೆರವು ಮಾಡಿದ್ದಾರೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿದ ಅವರು, ನಾನು ಊಟ ಮಾಡಿ ಮನೆಯ ಅಂಗಳದಲ್ಲಿದ್ದೆ. ನನ್ನ ಅಕ್ಕ ಮನೆಯಲ್ಲಿ ಮಲಗಿದ್ದರು. ಅದೇ ವೇಳೆ ಮನೆ ಎದುರಿನ ರೈಲು ಹಳಿಗೆ ಏನೋ ಬಿದ್ದ ಶಬ್ದ ಕೇಳಿತು. ಬಂದು ನೋಡಿದಾಗ ದೊಡ್ಡ ಮರ ಹಳಿಯಲ್ಲಿತ್ತು. ಅದೇ ವೇಳೆಗೆ ಮುಂಬಯಿ ರೈಲು ಸಂಚರಿಸುವ ಬಗ್ಗೆ ಗೊತ್ತಿತ್ತು. ಏನು ಮಾಡಬೇಕು ಎಂದು ತಕ್ಷಣಕ್ಕೆ ಗೊತ್ತಾಗಲಿಲ್ಲ. ಯಾರಿಗಾದರೂ ಕರೆ ಮಾಡಿ ತಿಳಿಸುವ ಎಂದು ಮನೆಗೆ ಬಂದೆ. ಆಗ ರೈಲಿನ ಹಾರ್ನ್ ಕೇಳಿಸಿತು. ಆಗ ದೇವರ ದಯೆಯಿಂದ ಅಲ್ಲೇ ಕೆಂಪು ಬಟ್ಟೆ ಕಂಡಿತು. ನನಗೆ ಹೃದಯದ ಆಪರೇಷನ್ ಆಗಿದ್ದರು ಅದನ್ನು ಲೆಕ್ಕಿಸದೆ ಕೆಂಪು ಬಟ್ಟೆ ಹಿಡಿದು ಹಳಿಯ ಬಳಿಗೆ ಓಡಿದೆ ಎಂದರು.
ಕೆಲವು ವರ್ಷಗಳ ಹಿಂದೆ ಪಚ್ಚನಾಡಿಯಲ್ಲಿ ರೈಲು ಹಳಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ್ದ ಕೃಷಿಕ ಪ್ರಾಂಕ್ಲಿನ್ ಫೆರ್ನಾಂಡಿಸ್ ಅವರು ರಥಪುಷ್ಪದ ಹೂವನ್ನು ಕೈಯಲ್ಲಿ ಹಿಡಿದು ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…