Featured

ಮಂಗಳೂರು: ಹಳಿಗೆ ಬಿದ್ದ ಮರ – ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ – Vishwanews24

ಮಂಗಳೂರು: ಹಳಿಗೆ ಬಿದ್ದ ಮರ – ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು: ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ನಡೆದಿದೆ.

ಚಂದ್ರಾವತಿ (70) ಅವರು ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ.

ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ ರೈಲು ಸಂಚರಿಸುವುದರಲ್ಲಿತ್ತು. ಇದನ್ನು ತಕ್ಷಣವೇ ಗಮನಿಸಿದ ಚಂದ್ರಾವತಿ ಅವರು ಮನೆಯಲ್ಲಿದ್ದ ಕೆಂಪು ವಸ್ತ್ರವನ್ನು ತಂದು ರೈಲು ಬರುವ ಸಮಯಕ್ಕೆ ಪ್ರದರ್ಶಿಸಿ ಲೋಕೋಪೈಲೆಟ್‌ ಅವರ ಗಮನ ಸೆಳೆದಿದ್ದಾರೆ.

ಇನ್ನು ಅಪಾಯ ಅರಿತ ಲೋಕೋಪೈಲೆಟ್‌ ರೈಲಿನ ವೇಗವನ್ನು ಕಡಿಮೆ ಮಾಡಿ ರೈಲನ್ನು ನಿಲ್ಲಿಸುವ ಮೂಲಕ ಸಂಭಾವ್ಯ ಅನಾಹುತ ತಪ್ಪಿಸಿದ್ದು, ಬಳಿಕ ಸ್ಥಳೀಯರು ಹಾಗೂ ರೈಲ್ವೇ ಇಲಾಖೆಯ ಕೆಲವರು ಸೇರಿ ಮರ ತೆರವು ಮಾಡಿದ್ದಾರೆ.

 

ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿದ ಅವರು, ನಾನು ಊಟ ಮಾಡಿ ಮನೆಯ ಅಂಗಳದಲ್ಲಿದ್ದೆ. ನನ್ನ ಅಕ್ಕ ಮನೆಯಲ್ಲಿ ಮಲಗಿದ್ದರು. ಅದೇ ವೇಳೆ ಮನೆ ಎದುರಿನ ರೈಲು ಹಳಿಗೆ ಏನೋ ಬಿದ್ದ ಶಬ್ದ ಕೇಳಿತು. ಬಂದು ನೋಡಿದಾಗ ದೊಡ್ಡ ಮರ ಹಳಿಯಲ್ಲಿತ್ತು. ಅದೇ ವೇಳೆಗೆ ಮುಂಬಯಿ ರೈಲು ಸಂಚರಿಸುವ ಬಗ್ಗೆ ಗೊತ್ತಿತ್ತು. ಏನು ಮಾಡಬೇಕು ಎಂದು ತಕ್ಷಣಕ್ಕೆ ಗೊತ್ತಾಗಲಿಲ್ಲ. ಯಾರಿಗಾದರೂ ಕರೆ ಮಾಡಿ ತಿಳಿಸುವ ಎಂದು ಮನೆಗೆ ಬಂದೆ. ಆಗ ರೈಲಿನ ಹಾರ್ನ್ ಕೇಳಿಸಿತು. ಆಗ ದೇವರ ದಯೆಯಿಂದ ಅಲ್ಲೇ ಕೆಂಪು ಬಟ್ಟೆ ಕಂಡಿತು. ನನಗೆ ಹೃದಯದ ಆಪರೇಷನ್‌ ಆಗಿದ್ದರು ಅದನ್ನು ಲೆಕ್ಕಿಸದೆ ಕೆಂಪು ಬಟ್ಟೆ ಹಿಡಿದು ಹಳಿಯ ಬಳಿಗೆ ಓಡಿದೆ ಎಂದರು.

ಕೆಲವು ವರ್ಷಗಳ ಹಿಂದೆ ಪಚ್ಚನಾಡಿಯಲ್ಲಿ ರೈಲು ಹಳಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ್ದ ಕೃಷಿಕ ಪ್ರಾಂಕ್ಲಿನ್‌ ಫೆರ್ನಾಂಡಿಸ್‌ ಅವರು ರಥಪುಷ್ಪದ ಹೂವನ್ನು ಕೈಯಲ್ಲಿ ಹಿಡಿದು ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

10 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

11 hours ago