ಮಂಗಳೂರು: ಕೆಲವು ಹಿಂದು ಸಂಘಟನೆಗಳು ಬ್ಯಾನರ್ ಹಾಕಿ ಲವ್ಜಿಹಾದ್ ನಿಯಂತ್ರಿಸಲು ಮುಂದಾಗಿರುವುದು ಹಾಸ್ಯಾಸ್ಪದ. ಇಲ್ಲಿ ಲವ್ ಜಿಹಾದ್ ಎನ್ನುವ ವಿಚಾರವೇ ಇಲ್ಲ. ಹೇಳಿಕೆ ನೀಡುವವರು ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ಸಂಘಟನೆಯನ್ನು ಗುರಾಣಿಯನ್ನಾಗಿ ಹಿಡಿದುಕೊಂಡಿದ್ದಾರೆ. ಇಲ್ಲಿ ಸಮುದಾಯದ ನಡುವೆ ಕಂದರ ಸೃಷ್ಟಿಸಲು ಮುಂದಾಗಿದ್ದಾರೆ. ಪೊಲೀಸರು ಸ್ವಯಂಪ್ರೇರಿತರಾಗಿ ಅವರ ಮೇಲೆ ಕೇಸು ದಾಖಲಿಸಬೇಕು ಎಂದು ಮುಸ್ಲಿಂ ಜಸ್ಟಿಸ್ ಫೋರಂ ನ ಸ್ಥಾಪಕ ರಫಿಯುದ್ದೀನ್ ಕುದ್ರೋಳಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ನಮ್ಮ ಸಮುದಾಯದ ಯುವಕರು ಯಾವುದೇ ರೀತಿಯ ಅನೈತಿಕ ಚಟುವಟಿಕೆ, ಕ್ರಿಮಿನಲ್ ಕೃತ್ಯಗಳಲ್ಲಿ ಭಾಗವಹಿಸಬಾರದು ಎಂದು ಪ್ರತೀ ಮಸೀದಿಗಳಲ್ಲೂ ನಾವು ಉಪದೇಶ ನೀಡುತ್ತಾ ಇರುತ್ತೇವೆ. ಸಮಸ್ಯೆಗಳನ್ನು ಬಗೆಹರಿಸಲು ಪೊಲೀಸ್ ಇಲಾಖೆ, ನ್ಯಾಯಾಂಗ ವಿಧಾನ ಇದೆ. ಆದರೆ ಇಂದು ತಪ್ಪಿತಸ್ಥರು ಅಲ್ಲದೇ ಇದ್ದರೂ ಅವರನ್ನು ಸಂತ್ರಸ್ತರನ್ನಾಗಿಸುವ ಕೆಲಸ ನಡೆದಿದೆ.
ಕೊಣಾಜೆ ಜಾನುವಾರು ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಬಂದಿದ್ದು, ಅದಕ್ಕೆ ಮತ್ತೆ ಸರಕಾರ ತಿದ್ದುಪಡಿ ಮಾಡಿದೆ.
ಕರ್ನಾಟಕದಲ್ಲಿ ಗೋಮಾಂಸ ತಿನ್ನುವುದನ್ನು ನಿಷೇಧಿಸಿಲ್ಲ. ಅದಕ್ಕೆ ಅದರದ್ದೇ ಆದ ಗೈಡ್ಲೈನ್ಸ್ ಇದೆ. ಆದರೆ ಒಂದು ಹೊಟೇಲ್ನಲ್ಲಿ ಬೀಫ್ ಖಾದ್ಯ ಇದೆ ಎಂದು ಹೊಟೇಲಿಗೆ ನುಗ್ಗಿ ದಾಂಧಲೆ ಮಾಡುವುದು, ಪೊಲೀಸರು ನುಗ್ಗುವುದು ಇದೆಲ್ಲಾ ಸರಿಯಲ್ಲ.
ಪೊಲೀಸರು ಕೂಡಾ ಯಾರು ಸಂತ್ರಸ್ತ ಇದ್ದಾನೆಯೋ ಆತನನ್ನು ಕರೆದು ಠಾಣೆಯಲ್ಲಿ ವಿಚಾರಣೆ ಮಾಡಬಹುದು. ಆದರೆ ಹಿಂದು ಸಂಘಟನೆಗಳ ಜೊತೆ ಸೇರಿ ಪೊಲೀಸರು ಕೂಡಾ ಈ ರೀತಿ ವರ್ತನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಬಗ್ಗೆ ನಾವು ಪ್ರತ್ಯೇಕ ಸಭೆಯನ್ನು ನಡೆಸಲಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಧ್ಯಕ್ಷ ಇರ್ಶಾದ್ ಯು. ಟಿ., ಪದಾಧಿಕಾರಿಗಳಾದ ಅಲಿ ಹಸನ್, ವಹಾಬ್ ಕುದ್ರೋಳಿ, ಅಬ್ದುಲ್ ಸಲಾಂ ಉಚ್ಚಿಲ, ಇಮ್ರಾನ್ ಅವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…