Featured

ಮಂಗಳೂರು: ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆ: ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು : ಪೊಲೀಸ್ ಆಯುಕ್ತರು – Vishwanews24

ಮಂಗಳೂರು: ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆ: ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು : ಪೊಲೀಸ್ ಆಯುಕ್ತರು

ಮಂಗಳೂರು: ಬಪ್ಪನಾಡುವಿನಲ್ಲಿ ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ಇಲ್ಲ ಎಂಬುದಾಗಿ ಅಳವಡಿಸಲಾದ ಫ್ಲೆಕ್ಸ್ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

 

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರೆ ಸಂಬಂಧ ಅಳವಡಿಸಲಾದ ಫ್ಲೆಕ್ಸ್ ನಲ್ಲಿ ಹಿಂದೂಯೇತರರಿಗೆ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಬರೆದಿರುವುದು ಸಾಮಾಜಿಕ ತಾಣಗಳನ್ನು ಹರಿದಾಡುತ್ತಿದೆ. ಅಲ್ಲದೆ ಸಂವಿಧಾನ ಮತ್ತು ಕಾನೂನು ಗೌರವಿಸದಿರುವವರಿಗೆ, ಗೋವುಗಳನ್ನು ಅಮಾನುಷವಾಗಿ ಕೊಲ್ಲುವವರಿಗೆ ಕೂಡಾ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬರೆಯಲಾಗಿದೆ. ಈ ಎರಡು ವಿಚಾರಗಳ ಬಗ್ಗೆ ದೇವಳದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಕಾರ್ಪೋರೇಟರ್ ಗಮನಕ್ಕೆ ತರಲಾಗಿದೆ. ಈ ವಿಚಾರವಾಗಿ ಅವರು ಏನು ಕ್ರಮಕ್ಕೆ ಮುಂದಾಗುತ್ತಾರೆ ಎಂಬುದನ್ನು ನೋಡಿ ಬಳಿಕ ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬುದಾಗಿ ನಿಯಮ ಇದೆ ಎಂದು ಆಡಳಿತ ಮಂಡಳಿಯವರು ಹೇಳಿದ್ದಾರೆ. ಆದರೆ ಈ ಬಗ್ಗೆ ಲಿಖಿತ ದಾಖಲೆಗಳು ಸಿಕ್ಕಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಪರಿಶೀಲನೆ ಮಾಡಲಿದ್ದಾರೆ. ಒಂದು ವೇಳೆ ಕಾನೂನು ಮೀರಿ ಉಲ್ಲಂಘನೆ ಕಂಡು ಬಂದಲ್ಲಿ ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

 

Vishwa News 24

Recent Posts

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

56 minutes ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

1 hour ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

2 hours ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

2 hours ago

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

3 hours ago