ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಎಂಬ ದೇಶ ವಿರೋಧಿ ಕಾರ್ಯಕ್ರಮ ನಡೆಸಲು ವ್ಯಾಪಕ ಪ್ರಚಾರ ನಡೆಯುತ್ತಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಾಹನಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಲಾಗಿದ್ದು ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವೀಡಿಯೊಗಳು ಹರಿದಾಡುತ್ತಿದೆ, ಇದೊಂದು ಕಾನೂನು ಬಾಹಿರ ಮತ್ತು ದೇಶವಿರೋಧಿ ಸಭೆಯಾಗಿರುತ್ತದೆ.
ಈ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಎಸ್ಡಿಪಿಐ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಮನವಿಯಲ್ಲಿ, ಭಾರತವು ಪರಿಪೂರ್ಣ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ರಾಷ್ಟ್ರ ಎಂಬುದನ್ನು ಸಂವಿಧಾನ ಪ್ರಬಲವಾಗಿ ಪ್ರತಿಪಾದಿಸಿರುತ್ತದೆ. ಈ ದೇಶವು ಯಾವುದೇ ದರ್ಮದ ಆಧಾರದಲ್ಲಿ ಗುರುತಿಸುವ ದೇಶವೆಂದು ಉಲ್ಲೇಖಿಸುವುದು ಕಾನೂನು ಬಾಹಿರ ಮತ್ತು ದೇಶದ್ರೋಹದ ಕ್ರತ್ಯವಾಗಿದೆ.
ಆದ್ದರಿಂದ ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದೇಶದ್ರೋಹಿ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈಗಾಗಲೇ ಜಿಲ್ಲಾದ್ಯಂತ ಪೋಸ್ಟರ್ ಅಂಟಿಸಿ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಹಿಂದೂ ಜನಜಾಗೃತಿ ಸಮಿತಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಆ ಸಂಘಟನೆಯನ್ನು ನಿಷೇಧ ಮಾಡಿ ಅದರ ಮುಖಂಡರನ್ನು ಬಂಧಿಸಬೇಕು ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದೆ.
ನಿಯೋಗದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಮದ್ವ,ಉಳ್ಳಾಲ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ಉಪಸ್ಥಿತರಿದ್ದರು.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…