ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಎಂಬ ದೇಶ ವಿರೋಧಿ ಕಾರ್ಯಕ್ರಮ ನಡೆಸಲು ವ್ಯಾಪಕ ಪ್ರಚಾರ ನಡೆಯುತ್ತಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಾಹನಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಲಾಗಿದ್ದು ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವೀಡಿಯೊಗಳು ಹರಿದಾಡುತ್ತಿದೆ, ಇದೊಂದು ಕಾನೂನು ಬಾಹಿರ ಮತ್ತು ದೇಶವಿರೋಧಿ ಸಭೆಯಾಗಿರುತ್ತದೆ.
ಈ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಎಸ್ಡಿಪಿಐ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಮನವಿಯಲ್ಲಿ, ಭಾರತವು ಪರಿಪೂರ್ಣ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ರಾಷ್ಟ್ರ ಎಂಬುದನ್ನು ಸಂವಿಧಾನ ಪ್ರಬಲವಾಗಿ ಪ್ರತಿಪಾದಿಸಿರುತ್ತದೆ. ಈ ದೇಶವು ಯಾವುದೇ ದರ್ಮದ ಆಧಾರದಲ್ಲಿ ಗುರುತಿಸುವ ದೇಶವೆಂದು ಉಲ್ಲೇಖಿಸುವುದು ಕಾನೂನು ಬಾಹಿರ ಮತ್ತು ದೇಶದ್ರೋಹದ ಕ್ರತ್ಯವಾಗಿದೆ.
ಆದ್ದರಿಂದ ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದೇಶದ್ರೋಹಿ ಕಾರ್ಯಕ್ರಮ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈಗಾಗಲೇ ಜಿಲ್ಲಾದ್ಯಂತ ಪೋಸ್ಟರ್ ಅಂಟಿಸಿ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಹಿಂದೂ ಜನಜಾಗೃತಿ ಸಮಿತಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಆ ಸಂಘಟನೆಯನ್ನು ನಿಷೇಧ ಮಾಡಿ ಅದರ ಮುಖಂಡರನ್ನು ಬಂಧಿಸಬೇಕು ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದೆ.
ನಿಯೋಗದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಮದ್ವ,ಉಳ್ಳಾಲ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…