ದಕ್ಷಿಣ ಕನ್ನಡ: ಈ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸುತ್ತಿದೆ. ಸಾಕ್ಷಿ ಇಲ್ಲದೇ ಇದ್ದಬದ್ದ ಸೆಕ್ಷನ್ ಹಾಕಿ ಜೈಲಿಗೆ ಹಾಕ್ತಿದ್ದಾರೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಕಿಡಿಕಾರಿದ್ದಾರೆ. ‘
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿಂದೂ ಮಹಾಸಭಾ ನಾಯಕರ ಮೇಲೆ ದಬ್ಬಾಳಿಕೆ ಹೆಚ್ಚಿದೆ. ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ, ಬೆದರಿಕೆ ಕೇಸ್ ಹಾಕಿ ಜೈಲಿಗೆ ಹಾಕಲು ಯತ್ನಿಸಿದರು. ಕೋರ್ಟ್ ಅವರಿಗೆ ಛೀಮಾರಿ ಹಾಕಿ ಬೇಲ್ ನೀಡಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಹಿಂದೂ ಮಹಾ ಸಭಾ ಮಾತಾಡ್ತಿದೆ. ಹಿಂದೂ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲು 224 ಕ್ಷೇತ್ರಗಳಿಗೂ ಗಮನ ಹರಿಸಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲಿಸಿ. ಅದು ಬಿಟ್ಟು ಜೈಲಿಗೆ ಕಳಿಸುವ ಕೆಲಸ ಬೇಡ ಎಂದ ರಾಜೇಶ್ ಪವಿತ್ರನ್, ನಾವು ಚುನಾವಣೆಯಲ್ಲೇ ಉತ್ತರ ಕೊಡ್ತೇವೆ. ಹಿಂದೂ ನಾಯಕರು ಅಧಿಕಾರಕ್ಕೆ ಬರಲು ಮಾಡಿದ ವೇದಿಕೆ ಹಿಂದೂ ಮಹಾ ಸಭಾ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ, ಸಂಘದ ನಾಯಕರು ಹಿಂದೂ ಮಹಾ ಸಭಾಕ್ಕೆ ಸೇರ್ತಿದಾರೆ. ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ನಾವು ಗೆಲ್ಲಬೇಕು. ಚುನಾವಣೆಯಲ್ಲಿ ನಮ್ಮನ್ನು ತಡೆಯಲು ಶಕ್ತಿ ಇದ್ದರೆ ಮಾಡಿ. ಅನೇಕರು ಅಪ್ಲಿಕೇಷನ್ ನೀಡಿದ್ದಾರೆ. 83 ಅಭ್ಯರ್ಥಿಗಳ ಪಟ್ಟಿ ಜನವರಿಯಲ್ಲಿ ಬಿಡುಗಡೆ ಮಾಡ್ತೇವೆ. ಕೆಲವು ರೈತ ಸಂಘಗಳು ನಮ್ಮೊಂದಿಗೆ ಸೇರ್ತಿದಾರೆ. ಕೇಸರಿ ಒಕ್ಕೂಟ – ಸಮಾನ ಮನಸ್ಕ ಸಂಘಟನೆಗಳು ಸೇರಿ ಆಗಿದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…