Featured

ಮಂಗಳೂರು : ಹಿಂದೂ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲು ಹಿಂದೂ ಮಹಾಸಭಾದಿಂದ 224 ಕ್ಷೇತ್ರಗಳಲ್ಲೂ ಸ್ಪರ್ಧೆ : ರಾಜೇಶ್ ಪವಿತ್ರನ್ – Vishwanews24

BJP ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸುತ್ತಿದೆ..

ಹಿಂದೂ ನಾಯಕರು ಅಧಿಕಾರಕ್ಕೆ ಬರಲು ಮಾಡಿದ ವೇದಿಕೆ ಹಿಂದೂ ಮಹಾ ಸಭಾ..

ಚುನಾವಣೆಯಲ್ಲೇ ಉತ್ತರ ಕೊಡ್ತೇವೆ..

.ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ನಾವು ಗೆಲ್ಲಬೇಕು..

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್

ದಕ್ಷಿಣ ಕನ್ನಡ: ಈ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸುತ್ತಿದೆ. ಸಾಕ್ಷಿ ಇಲ್ಲದೇ ಇದ್ದಬದ್ದ ಸೆಕ್ಷನ್ ಹಾಕಿ ಜೈಲಿಗೆ ಹಾಕ್ತಿದ್ದಾರೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಕಿಡಿಕಾರಿದ್ದಾರೆ. ‘

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿಂದೂ ಮಹಾಸಭಾ ನಾಯಕರ ಮೇಲೆ ದಬ್ಬಾಳಿಕೆ ಹೆಚ್ಚಿದೆ. ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ, ಬೆದರಿಕೆ ಕೇಸ್ ಹಾಕಿ ಜೈಲಿಗೆ ಹಾಕಲು ಯತ್ನಿಸಿದರು. ಕೋರ್ಟ್ ಅವರಿಗೆ ಛೀಮಾರಿ ಹಾಕಿ ಬೇಲ್ ನೀಡಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಹಿಂದೂ ಮಹಾ ಸಭಾ ಮಾತಾಡ್ತಿದೆ. ಹಿಂದೂ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲು 224 ಕ್ಷೇತ್ರಗಳಿಗೂ ಗಮನ ಹರಿಸಿದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲಿಸಿ. ಅದು ಬಿಟ್ಟು ಜೈಲಿಗೆ ಕಳಿಸುವ ಕೆಲಸ ಬೇಡ ಎಂದ ರಾಜೇಶ್ ಪವಿತ್ರನ್, ನಾವು ಚುನಾವಣೆಯಲ್ಲೇ ಉತ್ತರ ಕೊಡ್ತೇವೆ. ಹಿಂದೂ ನಾಯಕರು ಅಧಿಕಾರಕ್ಕೆ ಬರಲು ಮಾಡಿದ ವೇದಿಕೆ ಹಿಂದೂ ಮಹಾ ಸಭಾ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ, ಸಂಘದ ನಾಯಕರು ಹಿಂದೂ ಮಹಾ ಸಭಾಕ್ಕೆ ಸೇರ್ತಿದಾರೆ. ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ನಾವು ಗೆಲ್ಲಬೇಕು. ಚುನಾವಣೆಯಲ್ಲಿ ನಮ್ಮನ್ನು ತಡೆಯಲು ಶಕ್ತಿ ಇದ್ದರೆ ಮಾಡಿ. ಅನೇಕರು ಅಪ್ಲಿಕೇಷನ್ ನೀಡಿದ್ದಾರೆ. 83 ಅಭ್ಯರ್ಥಿಗಳ ಪಟ್ಟಿ ಜನವರಿಯಲ್ಲಿ ಬಿಡುಗಡೆ ಮಾಡ್ತೇವೆ. ಕೆಲವು ರೈತ ಸಂಘಗಳು ನಮ್ಮೊಂದಿಗೆ ಸೇರ್ತಿದಾರೆ. ಕೇಸರಿ ಒಕ್ಕೂಟ – ಸಮಾನ ಮನಸ್ಕ ಸಂಘಟನೆಗಳು ಸೇರಿ ಆಗಿದೆ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago