Featured

ಮಂಗಳೂರು : ಹಿಂದೂ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲು ಹಿಂದೂ ಮಹಾಸಭಾದಿಂದ 224 ಕ್ಷೇತ್ರಗಳಲ್ಲೂ ಸ್ಪರ್ಧೆ : ರಾಜೇಶ್ ಪವಿತ್ರನ್ – Vishwanews24

BJP ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸುತ್ತಿದೆ..

ಹಿಂದೂ ನಾಯಕರು ಅಧಿಕಾರಕ್ಕೆ ಬರಲು ಮಾಡಿದ ವೇದಿಕೆ ಹಿಂದೂ ಮಹಾ ಸಭಾ..

ಚುನಾವಣೆಯಲ್ಲೇ ಉತ್ತರ ಕೊಡ್ತೇವೆ..

.ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ನಾವು ಗೆಲ್ಲಬೇಕು..

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್

ದಕ್ಷಿಣ ಕನ್ನಡ: ಈ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸುತ್ತಿದೆ. ಸಾಕ್ಷಿ ಇಲ್ಲದೇ ಇದ್ದಬದ್ದ ಸೆಕ್ಷನ್ ಹಾಕಿ ಜೈಲಿಗೆ ಹಾಕ್ತಿದ್ದಾರೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಕಿಡಿಕಾರಿದ್ದಾರೆ. ‘

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿಂದೂ ಮಹಾಸಭಾ ನಾಯಕರ ಮೇಲೆ ದಬ್ಬಾಳಿಕೆ ಹೆಚ್ಚಿದೆ. ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ, ಬೆದರಿಕೆ ಕೇಸ್ ಹಾಕಿ ಜೈಲಿಗೆ ಹಾಕಲು ಯತ್ನಿಸಿದರು. ಕೋರ್ಟ್ ಅವರಿಗೆ ಛೀಮಾರಿ ಹಾಕಿ ಬೇಲ್ ನೀಡಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಹಿಂದೂ ಮಹಾ ಸಭಾ ಮಾತಾಡ್ತಿದೆ. ಹಿಂದೂ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲು 224 ಕ್ಷೇತ್ರಗಳಿಗೂ ಗಮನ ಹರಿಸಿದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲಿಸಿ. ಅದು ಬಿಟ್ಟು ಜೈಲಿಗೆ ಕಳಿಸುವ ಕೆಲಸ ಬೇಡ ಎಂದ ರಾಜೇಶ್ ಪವಿತ್ರನ್, ನಾವು ಚುನಾವಣೆಯಲ್ಲೇ ಉತ್ತರ ಕೊಡ್ತೇವೆ. ಹಿಂದೂ ನಾಯಕರು ಅಧಿಕಾರಕ್ಕೆ ಬರಲು ಮಾಡಿದ ವೇದಿಕೆ ಹಿಂದೂ ಮಹಾ ಸಭಾ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ, ಸಂಘದ ನಾಯಕರು ಹಿಂದೂ ಮಹಾ ಸಭಾಕ್ಕೆ ಸೇರ್ತಿದಾರೆ. ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ನಾವು ಗೆಲ್ಲಬೇಕು. ಚುನಾವಣೆಯಲ್ಲಿ ನಮ್ಮನ್ನು ತಡೆಯಲು ಶಕ್ತಿ ಇದ್ದರೆ ಮಾಡಿ. ಅನೇಕರು ಅಪ್ಲಿಕೇಷನ್ ನೀಡಿದ್ದಾರೆ. 83 ಅಭ್ಯರ್ಥಿಗಳ ಪಟ್ಟಿ ಜನವರಿಯಲ್ಲಿ ಬಿಡುಗಡೆ ಮಾಡ್ತೇವೆ. ಕೆಲವು ರೈತ ಸಂಘಗಳು ನಮ್ಮೊಂದಿಗೆ ಸೇರ್ತಿದಾರೆ. ಕೇಸರಿ ಒಕ್ಕೂಟ – ಸಮಾನ ಮನಸ್ಕ ಸಂಘಟನೆಗಳು ಸೇರಿ ಆಗಿದೆ ಎಂದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

21 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

21 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

22 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

23 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

23 hours ago