Featured

ಮಂಗಳೂರು ಹಿಜಾಬ್ ವಿವಾದ : ಕಾಲೇಜಿನಿಂದ ಟಿಸಿ ಪಡೆಯಲು ಮುಂದಾದ ವಿದ್ಯಾರ್ಥಿನಿಯರು – Vishwanews24

ಮಂಗಳೂರು ಹಿಜಾಬ್ ವಿವಾದ : ಕಾಲೇಜಿನಿಂದ ಟಿಸಿ ಪಡೆಯಲು ಮುಂದಾದ ವಿದ್ಯಾರ್ಥಿನಿಯರು..

ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ..

ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿ..

ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಸ್ಪಷ್ಟನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಅಧೀನದ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ.

ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಟ್ರಾನ್ಸ್​ಫರ್ ಸರ್ಟಿಫಿಕೇಟ್ (ಟಿಸಿ) ಪಡೆಯಲು ಮುಂದಾಗಿರುವುದು ಬೆಳಕಿಗೆ ಬಂದಿದೆ.

ಮಂಗಳೂರು ವಿ ವಿ ಕಾಲೇಜಿನಲ್ಲಿ ಇತ್ತೀಚೆಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ನಿಯಮಾವಳಿಗಳನ್ನು ಮಾಡಲಾಗಿತ್ತು. ಆ ಬಳಿಕ ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿಚಾರದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು‌ ನಿರಾಕರಿಸಿದ್ದರು.

ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳುವುದಿದ್ದರೆ ಅವರಿಗೆ ಟಿಸಿ ನೀಡಲು ವ್ಯವಸ್ಥೆ ಮಾಡಲಾಗುವುದೆಂದು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದರು. ಇದೀಗ ಮಂಗಳೂರು ವಿವಿಯ ಹಂಪನಕಟ್ಟೆ ಕಾಲೇಜಿನ ಐದು ವಿದ್ಯಾರ್ಥಿನಿಯರು ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಟಿಸಿ ಪಡೆಯಲು ಅಧಿಕೃತವಾಗಿ ಯಾರೂ ಅರ್ಜಿ ಸಲ್ಲಿಕೆ ಮಾಡಿಲ್ಲ: ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಪ್ರತಿಕ್ರಿಯೆ ನೀಡಿದ್ದು, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ. ಇದೀಗ ಕಾಲೇಜಿನಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

3 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

4 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

4 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

4 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

6 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

7 hours ago