Featured

ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ನಿಧನ -Vishwanews24

ಮಂಗಳೂರು: ಹಿರಿಯ ಭಾಗವತ ನಾರಾಯಣ ಬಲಿಪ ನಿಧನ

ಮೂಡುಬಿದಿರೆ : ಅನಾರೋಗ್ಯದ ಕಾರಣದಿಂದಾಗಿ ಹಿರಿಯ ಭಾಗವತ ನಾರಾಯಣ ಬಲಿಪ ಅವರು ನಿಧನರಾಗಿದ್ದಾರೆ. ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕಳೆದ ಹದಿನೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಬಲಿಪ ಅವರು, ತೆಂಕು ತಿಟ್ಟಿನ ಮೇರು ಭಾಗವತರಾಗಿದ್ದರು. ಕಳೆದ ೧೫ ದಿನದಿಂದ ಅಸ್ವಸ್ಥರಾಗಿದ್ದರು. ಇಂದು ಸಂಜೆ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಸುದೀರ್ಘ ೬೦ ವರ್ಷಗಳ ಕಾಲ ಸೇವೆ ನೀಡಿದ್ದರು. ಬಲಿಪರು ಹಾಡುಗಳು ಯಕ್ಷಗಾನ ರಂಗದಲ್ಲಿ ಜನಜನಿತವಾಗಿವೆ. ಕಟೀಲು ಮೇಳದಲ್ಲಿ ಹಲವಾರು ವರುಷಗಳ ಕಾಲ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಮಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಲಿಪ ಅವರು ಪಡೆದುಕೊಂಡಿದ್ದಾರೆ.

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರಾಗಿದ್ದರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.

ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ ೧೩, ೧೯೩೮ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು ೭ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು ೧೩ನೇ ವರ್ಷದಲ್ಲಿ ರಂಗ ಪ್ರವೇಶಗೈದು, ಸುದೀರ್ಘ ಸೇವೆಯನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

10 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

10 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

10 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

10 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

11 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

12 hours ago